ಬೀದರ್ : ಅಂತರಾಜ್ಯ ಗಾಂಜಾ ಸಾಗಾಟ ಮಾಡ್ತಿದ್ದ ಖದೀಮರ ಹೆಡೆಮುರಿ ಕಟ್ಟಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವಡಗಾಂವ-ಜಮಗಿ ಮಾರ್ಗವಾಗಿ ಗಾಂಜಾ ಸಾಗಿಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಮೂವರನ್ನ ಬಂಧಿಸಿದ್ದು, ಲಕ್ಷಾಂತರ ರೂಪಾಯಿ ಗಾಂಜಾ ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಆರೋಪಿಗಳು ಬೀದರ್ ಮೂಲಕ ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ಗಾಂಜಾ ಸಾಗಾಟ ಮಾಡ್ತಿದ್ದ ಬಗ್ಗೆ ಖಚಿತ ಮಾಹಿರಿ ಆಧರಿ ಪೊಲೀಸರು ಆರೋಪಿಗಳ ಬಂಧಿಸಿ ಗಾಂಜಾ ವಶಕ್ಕೆ ಪಡೆದಿದ್ದಾರೆ.
ಬಂಧಿತರಿಂದ 70.1 ಕೆಜಿ ಗಾಂಜಾ ವಶಕ್ಕೆ ಪಡೆದಿದ್ದು ಅದರ ಮೌಲ್ಯ 9 ಲಕ್ಷ 80 ಸಾವಿರ ಎಂದು ಅಂದಾಜಿಸಲಾಗಿದೆ. ಆರೋಪಿಗಳು ದ್ವೀಚಕ್ರ ವಾಹನದ ಮೂಲಕ ಗಾಂಜಾ ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು, ಮೂವರ ಆರೋಪಿತರ ಬಂಧಿಸಲಾಗಿದ್ದು ಇನ್ನೂ ಮೂವರ ಆರೋಪಿಗಳು ಪರಾರಿಯಾಗಿದ್ದಾರೆ.
ಘಟನೆ ಕುರಿತು ಸಂತಪೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.