ಸುದ್ದಿಬಿಂದು ಬ್ಯೂರೋ
ಶಿರಸಿ-ಕುಮಟಾ : ಉತ್ತರಕನ್ನಡ ಜಿಲ್ಲೆಯ ಮಲೆನಾಡು ಹಾಗೂ ಕರಾವಳಿ ಕ್ಷೇತ್ರದವಾಗಿರುವ ಶಿರಸಿ ಹಾಗೂ ಕುಮಟಾ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಶಿರಸಿ, ಕುಮಟಾ ಆಗಮಿಸಲಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ.ಶಿರಸಿಯಲ್ಲಿ ಜೆಡಿಎಸ್ ಅಭ್ಯರ್ಥಿ ಉಪೇಂದ್ರ ಪೈ ಹಾಗೂ ಕುಮಟಾದಲ್ಲಿ ಸೂರಜ್ ನಾಯ್ಕ ಸೋನಿ ಪರ ಪ್ರಚಾರ ನಡೆಸಲಿದ್ದಾರೆ. ನಿನ್ನೆ ಜೊಯೀಡಾ, ಹಾಗೂ ದಾಂಡೇಲಿಯಲ್ಲಿ ಪ್ರಚಾರ ಮುಗಿಸಿ ರಾತ್ರಿ ಅಲ್ಲಿಯೆ ವಾಸ್ತವ್ಯ ಮಾಡಿದ್ದು, ಇಂದು ದಾಂಡೇಲಿಯಿಂದ ಹೆಲಿಕಾಪ್ಟರ್ ಮೂಲಕ ಶಿರಸಿಗೆ ಆಗಮಿಸಲಿದ್ದು, ಅಲ್ಲಿ ಪ್ರಚಾರ ನಡೆಸಿ ಬಳಿಕ ಶಿರಸಿಯಿಂದ ಕುಮಟಾಕ್ಕೆ ಹೆಲಿಕಾಪ್ಟರ್ ಮೂಲಕ ಕುಮಟಾಕ್ಕೆ ಆಗಮಿಸಲಿದ್ದಾರೆ.
ಕುಮಟಾಕ್ಕೆ ಆಗಮಿಸಲಿರುವ ಕುಮಾರಸ್ವಾಮಿ ಅವರು ಕುಮಟಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿರುವ ಸೂರಜ್ ನಾಯ್ಕ ಸೋನಿ ಪರ ಪಟ್ಟಣದಲ್ಲಿ ರ್ಯಾಲಿ ನಡೆಸಲಿದ್ದು, ಬಳಿಕ ಮಣಕಿ ಮೈದಾನದಲ್ಲಿ ನಡೆಯುವ ಜೆಡಿಎಸ್ ಪಂಚರತ್ನ ಸಮಾವೇಶದಲ್ಲಿ ಕಾರ್ಯಕರ್ತರನ್ನ ಉದ್ದೇಶಿಸಿ ಮಾತನಾಡಲಿದ್ದಾರೆ. ಸಮಾವೇಶದಲ್ಲಿ ಸಾವಿರಾರೂ ಸಂಖ್ಯೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಹಾಗೂ ಸೂರಜ್ ನಾಯ್ಕ ಸೋನಿ ಅಭಿಮಾನಿಗಳು ಆಗಮಿಸಲಿದ್ದಾರೆ.