ಸುದ್ದಿಬಿಂದು ಬ್ಯೂರೋ
ಕಾರವಾರ : ಅಂಕೋಲಾದ ಹಟ್ಟಿಕೇರಿಯಲ್ಲಿ ನಾಳೆ ನಡೆಯುವ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಕಾರವಾರ ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ಅವರು ಅಮದಳ್ಳಿಯ ಗಣಪತಿ ದೇವಸ್ಥಾನದಲ್ಲಿ108 ತೆಂಗಿನಕಾಯಿ ಗಣಹೋಮ ಪೂಜೆ ಸಲ್ಲಿಸಿದ್ದರು.

ಅಮದಳ್ಳಿಯ ಗಣಪತಿ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ‌ ಆಗಮಿಸಿದ ಶಾಸಕಿ ರೂಪಾಲಿ ನಾಯ್ಕ ಅವರು ದೇವರಿಗೆ 108ತೆಂಗಿನಕಾಯಿ ಗಣಹೋಮ ಪೂಜೆ ಸಲ್ಲಿಸಿದರು.‌ ಹಟ್ಟಿಕೇರಿಯಲ್ಲಿ ನಡೆಯುವ ಬಿಜೆಪಿ ಸಮಾವೇಶಕ್ಕೆ ನಾಳೆ ದೇಶದ ಪ್ರಧಾನಿ ಮೋದಿ ಅವರು ಆಗಮಿಸುತ್ತಿದ್ದು, ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ತೊಂದರೆಗಳು ಆದೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುವಂತೆ ರೂಪಾಲಿ ನಾಯ್ಕ ದೇವರಲ್ಲಿ ಪ್ರಾರ್ಥಿಸಿಕೊಂಡರು…