ಸುದ್ದಿಬಿಂದು ಬ್ಯೂರೋ
ಅಂಕೋಲಾ : ಚುನಾವಣಾ ಪ್ರಚಾರ ಅಂಗವಾಗಿ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಟ್ಟಿಕೇರಿಯಲ್ಲಿ ಆಗಮಿಸಿದ ನರೇಂದ್ರ ಮೋದಿ ಅವರು, ಸಮಾವೇಶದ ಪೂರ್ವದಲ್ಲಿ ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಕೈ ಕುಲಕಿ ಮಾತನಾಡಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿಸಿದ್ದರು.

ಸಮಾರಂಭಕ್ಕೂ ಮೊದಲು ಪದ್ಮ ಪ್ರಶಸ್ತಿ ಪುರಸ್ಕೃತರಾದ ತುಳಸಿ ಗೌಡ ಮತ್ತು ಸುಕ್ರಿ ಬೊಮ್ಮಗೌಡ ಅವರನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಗೌರವಪೂರಕ ನಮನ ಸಲ್ಲಿಸಿದರು. ಹಾಲಕ್ಕಿ ಸಮುದಾಯಕ್ಕೆ ಸೇರಿದ ಈ ಮಹಾನ್ ಮಹಿಳೆಯರ ಸಾಧನೆಗೆ(ಪರಿಸರ ಕಾಳಜಿ, ಜಾನಪದ ಗಾಯನ)ಕ್ಕೆ ಮೆಚ್ಚಿ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಯನ್ನು ಭಾರತ ಸರ್ಕಾರ ನೀಡಿ ಗೌರವಿಸಿತ್ತು.