ಸುದ್ದಿಬಿಂದು ಬ್ಯೂರೋ

ಶಿರಸಿ : ಖಾಸಗಿ ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪಿರುವ ಘಟನರ ನಗರದ ಸಾಮ್ರಾಟ್ ಹೊಟೇಲ್ ಎದುರಿನ ರಸ್ತೆಯಲ್ಲಿ ನಡೆದಿದೆ.

ಅಪಘಾತದಲ್ಲಿ ಮಹೇಶ ಬೋವಿವಡ್ಡರ (26) ಎಂದು ಹೋತ್ತಾಗಿದ್ದು, ಮೃತ ಯುವಕ ಶಿರಸಿ ನಗರದ ಗಣೇಶ ನಗರದ ನಿವಾಸಿ ಎಂದು ತಿಳಿದು ಬಂದಿದ್ದೆ. ಖಾಸಗಿ ಬಸ್ ಚಾಲಕ ಅಜಾಗರೂಕತೆಯಿಂದ ಬಸ್ ಚಲಾಯಿಸಿರುವುದೆ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಅಪಘಾತವಾಗುತ್ತಿದ್ದಂತೆ ಬಸ್ ಚಾಲಕ ಸ್ಥಳದಲ್ಲೆ ಬಸ್ ಬಿಟ್ಟು ಪರಾರಿಯಾಗಿದ್ದಾನೆ‌. ಘಟನಾ ಸ್ಥಳಕ್ಕೆ ಶಿರಸಿ ಪಿಎಸ್ ಐ ಭೀಮಾ ಶಂಕರ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.