ಸುದ್ದಿಬಿಂದು ಬ್ಯೂರೋ
ಬೀದರ್ : ವಿವಾಹವಾದ ಎರಡೆ ದಿನದಲ್ಲಿ ನವವಿವಾಹಿತ ವ್ಯಕ್ತಿ ಓರ್ವ ಮಾವನ ಮನೆಯಿಂದ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಬಸ್ ಅಪಘಾತದಲ್ಲಿ ಆತ ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಕೋಳಾರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಅರುಣ್ ಕಾಶಿನಾಥ ಪಡಸಾಲೆ (33) ಎಂಬಾತನೆ ಮೃತಪಟ್ಟಿರುವ ವ್ಯಕ್ತಿಯಾಗಿದ್ದಾನೆ. ಈತ ಕಮಲನಗರ ತಾಲೂಕಿನ ಬಳತ್ (ಬಿ) ಗ್ರಾಮದ ನಿವಾಸಿ ಎಂಬುದು ಗೋತ್ತಾಗಿದೆ.
ಈತ ಜೂನ್ .29ರಂದು ಮದುವೆಯಾಗಿದ್ದ ಅರುಣ, ತನ್ನ ಪತ್ನಿ ಗ್ರಾಮ (ಮಾವನ ಮನೆ) ಹುಮನಾಬಾದ ತಾಲೂಕಿನ ಮುಗನೂರ್ನಿಂದ ನೌಬಾದ್ಗೆ ಬೈಕ್ ಮೇಲೆ ವಾಪಸ್ ಬರುವಾಗ ಸರ್ಕಾರಿ ಬಸ್ಗೆ ಡಿಕ್ಕಿ ಆಗಿದೆ. ತೀವ್ರ ರಕ್ತಸ್ರಾವ ಆದ ಪರಿಣಾಮ ಅರುಣ ಸ್ಥಳದಲ್ಲೇ ಮೃಪಟ್ಟಿದ್ದಾನೆ.
ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಅರುಣ ಪಡಸಾಲೆ, ನೌಬಾದ್ನ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. ಈಗ ಮದುವೆಯಾದ ಎರಡು ದಿನದಲ್ಲೇ ದುರಂತ ಸಂಭವಿಸಿರುವುದು ಎರಡು ಕುಟುಂಬಗಳಿಗೆ ಆಘಾತವನ್ನುಂಟು ಮಾಡಿದೆ.
ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ