ಸುದ್ದಿಬಿಂದು ಬ್ಯೂರೋ
ಬನವಾಸಿ : ಉತ್ತರಕನ್ನಡ(Uttarkannada) ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿ(Banavasi)ರಸ್ತೆಯ ದಿವಗಿ ಪ್ಯಾಕ್ಟ್ರಿ ಬಳಿ ಎರಡು ಬೈಕ್ ನಡುವೆ ಮುಖಾಮುಖಿ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಅಪಘಾತದಲ್ಲಿ ಬೈಕ್ ಸವಾರ ವಿವೇಕಾನಂದ ನಗರದ ಅಬ್ರಾದ್ (19)ಎಂಬಾತನೆ ಮೃತಪಟ್ಟ ಯುವಕನಾಗಿದ್ದಾನೆ.ಇನ್ನೂ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಸ್ಥಳೀಯರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ ಗಾಯಗೊಂಡವರನ್ನ ಸ್ಥಳೀಯ ಸರಕಾರಿ ಆಸ್ಪತ್ರೆಗೆ(Hospital)ದಾಖಲಿಸಿ ಚಿಕಿತ್ಸೆ ನೀಡಲಾಗಿದೆ