ಸುದ್ದಿಬಿಂದು ಬ್ಯೂರೋ
ಭಟ್ಕಳ‌ : ಚಲಿಸುತ್ತಿದ್ದ ರೈಲನ್ನು ಏರಲು ಹೋದ ಪ್ರಯಾಣಿಕನೊರ್ವ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ರೈಲಿಗೆ ಸಿಲುಕುವ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಕೊಂಕಣ ರೈಲ್ವೆ ಸಿಬ್ಬಂದಿಯೊರ್ವ ತಕ್ಷಣವೇ ಅವರನ್ನು ಹಿಡಿದು ಅಪಾಯದಿಂದ ಪಾರು ಮಾಡಿದ್ದ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳ ರೈಲ್ಬೆ ನಿಲ್ದಾಣದಲ್ಲಿ ನಡೆದಿದೆ.

ಗೋವಾದ(Goa)ಮಡಗಾಂನಿಂದ ಎರ್ನಾಕುಲಂ(Ernakulam)ಕಡೆಗೆ ಸಾಗುತಿದ್ದ ರೈಲು ಸಂಖ್ಯೆ 10215 ಭಟ್ಕಳದಲ್ಲಿ ನಿಲುಗಡೆಯಾಗಿತ್ತು.ರೈಲು ಪುನಃ ಹೋರಡುವಾಗ ಓರ್ವ ಪ್ರಯಾಣಿಕ ರೈಲು ಏರುವಾಗ ಏಡವಿದಂತೆ ತೋರಿದರು. ಇದನ್ನು ಅರಿತ ಕೊಂಕಣ ರೈಲ್ವೆ (Konkan Railway) ಪಾಯಿಂಟ್ಸಮನ್ ಮಣ್ಕುಳಿಯ ಯೊಗೇಶ ನಾಯ್ಕ ಅವರನ್ನು ರೈಲು ಏರಿಸಲು ಪ್ರಯತ್ನಿಸಿದರೂ ಸಾಧ್ಯವಾಗದೇ ಅವರ ಒಂದು ಕಾಲು ರೈಲಿನಿಂದ ಕೆಳಗೆ ಜಾರಿತು, ಇನ್ನೇನೂ ರೈಲಿನ ಕೆಳಗಡೆ ಸಿಲುಕುತ್ತಾರೆ ಎನ್ನುವಾಗ ಯೋಗೇಶ ನಾಯ್ಕ ತಮ್ಮ ಸಮಯಪ್ರಜ್ಞೆಯಿಂದ ಅವರನ್ನು ಪ್ಲಾಟಫಾರಂ ಕಡೆಗೆ ಎಳೆದು ಜೀವ ರಕ್ಷಿಸಿದ್ದಾರೆ.

ನಂತರ ರೈಲು ನಿಲುಗಡೆಗೆ ಬ್ಯಾಟರಿಯಿಂದ ಸಿಗ್ನಲ್ ತೋರಿಸಿ ಪ್ರಯಾಣಿಕನನ್ನು ಪುನಃ ರೈಲಗೆ ಹತ್ತಿಸಿ ಕಳುಹಿಸಿದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಅಪಾಯಕಾರಿ ಸನ್ನಿವೇಶದಲ್ಲಿ ಸಮಯಪ್ರಜ್ಞೆಯಿಂದ ತನನ್ನು ಪಾರು ಮಾಡಿದ ಯೊಗೇಶ ನಾಯ್ಕ ಸಿಬ್ಬಂದಿಗೆ ಪ್ರಯಾಣಿಕ ಧನ್ಯವಾದ ಅರ್ಪಿಸಿ ಮುಂದಿನ ಪ್ರಯಾಣ ಆರಂಭಿಸಿದ್ದಾರೆ. ಸಿಸಿ ಟಿವಿಯ ದೃಶ್ಯ ಎಲ್ಲೇಡೆ ಸೋಶಿಯಲ್ ಹರಿದಾಡುತ್ತಿದ್ದು, ಮಣ್ಕುಳಿಯ ಯೊಗೇಶ ನಾಯ್ಕ ಅವರ ಸಾಹಸಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.