ಸುದ್ದಿಬಿಂದು ಬ್ಯೂರೋ
ಮುಂಡಗೋಡ : ಗ್ರಾಮ ಪಂಚಾಯತ ಪಿಡಿಓ ಒಬ್ಬರು (ಪ್ರಭಾರ ಪಿಡಿಓ) ತಮ್ಮದೆ ತೋಟ ಒಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಉತ್ತರಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಸನವಳ್ಳಿ ಗ್ರಾಮದಿಂದ ವರದಿಯಾಗಿದೆ.

ರಾಮಲಿಂಗ ಶಿವಲಿಂಗಪ್ಪ ಕಳಸಗೇರಿ(39) ಎಂಬುವವರೇ ನೇಣಿಗೆ ಶರಣಾಗಿದ್ದಾರೆ. ಇವರು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹೊನ್ನತ್ತಿ ಗ್ರಾಮ ಪಂಚಾಯತಿಯ ಪ್ರಭಾರ ಪಿಡಿಓ (pdo) ಆಗಿ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ನಿನ್ನೆ ರವಿವಾರ ರಜೆ ಇದ್ದ‌ ಕಾರಣ ರಾಮಲಿಂಗ ಕಳಸಗೇರಿ ಸನವಳ್ಳಿಯಲ್ಲಿ ತಮ್ಮ ಮನೆಗೆ ಬಂದಿದ್ದರು, ಇವರು ಇಂದು ಏಕಾಏಕಿ ತೋಟದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ‌ ಅವರ ಆತ್ಮಹತ್ಯೆ ಇದುವರಗೆ ನಿಖರವಾಗಿರುವ ಕಾರಣ ಬಂದಿಲ್ಲಿ.

.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಸದ್ಯ ಮುಂಡಗೋಡ ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.