Uttarkannada

ಸುದ್ದಿಬಿಂದು ಬ್ಯೂರೋ
Sirsi: ಶಿರಸಿ : ಉತ್ತರಕನ್ನಡ (Uttarkannada) ಜಿಲ್ಲೆಯ ಶಿರಸಿ (Sirsi) ತಾಲೂಕಿನ ಶಾಲ್ಮಲಾ ನದಿಯಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ಐವರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ
.

ರಾಮನಬೈಲಿನ ಮೌಲಾನ ಮಹಮ್ಮದ್ ಸಲೀಮ್ ಕಲೀಲ್ ರೆಹಮಾನ್ (೪೪),
ರಾಮನಬೈಲಿನ ನಾದಿಯಾ ನೂರ್ ಅಹಮದ್ ಶೇಖ್ (೨೦),
ಕಸ್ತೂರಬಾ ನಗರದ ವಿದ್ಯಾರ್ಥಿ ಮಿಸ್ಬಾ ತಬಸುಮ್ (೨೧),
ರಾಮನಬೈಲಿನ ನಬಿಲ್ ನೂರ್ ಅಹಮದ್ ಶೇಖ್(೨೨) ಹಾಗೂ ರಾಮನಬೈಲಿನ ವಿದ್ಯಾರ್ಥಿ ಉಮರ್ ಸಿದ್ದಿಕ್ ಮೃತರಾಗಿದ್ದಾರೆ.

ಈಗಾಗಲೆ ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣೆಯ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

.