ಸುದ್ದಿಬಿಂದು ಬ್ಯೂರೋ
SIRSI : ಶಿರಸಿ : ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಗುತ್ತಿಗೆದಾರನೋರ್ವನಿಗೆ ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಶಿರಸಿ ನಗರದ ವಿವೇಕಾನಂದ ನಗರದಲ್ಲ ನಡೆದಿದೆ.
ಅಪಘಾತದಲ್ಲಿ ಸಿವಿಲ್ ಗುತ್ತಿಗೆದಾರಾಗಿದ್ದ ಕುಬೇರ ರಾಮಪ್ಪ ಪೂಜಾರ್ (46) ಎಂಬುವವರೆ ಮೃತಪಟ್ಟಿದ್ದಾರೆ. ಇವರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅತೀ ವೇಗವಾಗಿ ಬಂದ ಬೈಕ್ ಸವಾರನೋರ್ವ ಡಿಕ್ಕಿ ಹೊಡೆದಿದ್ದಾನೆ. ಇದರಿಂದಾಗಿ ಪಾದಚಾರಿ ಕುಬೇರ್ ಪೂಜಾರ್ ಅವರು ಗಂಭೀರವಾಗಿ ಗಾಯಗೊಂಡಿದ್ದರು.
ಗಾಯಗೊಂಡ ಅವರನ್ನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಅವರು ಮಾರ್ಗ ಮಧ್ಯದಲ್ಲಿ ಪ್ರಾಣ ಬಿಟ್ಟಿದ್ದಾರೆ. ಈ ಬಗ್ಗೆ ಶಿರಸಿಯ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಬೈಕ್ ಸವಾರನ ವಿರುದ್ದ ಪ್ರಕರಣ ದಾಖಲಾಗಿದೆ.