Sirsi: ಶಿರಸಿ: ಆಸ್ಪತ್ರೆಯ ನಿರ್ಮಾಣ ಹಂತದ ವಸತಿಗೃಹದ ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದೆ.

ಆಂದ್ರಪ್ರದೇಶದ ಮೂಲದ ಸುರೇಂದ್ರ (38) ಮೃತ ದುರ್ದೈವಿಯಾಗಿದ್ದಾನೆ. ಶಿರಸಿ ನಗರದ ಪಂಡಿತ ಸಾರ್ವಜನಿಕ ಆಸ್ಪತ್ರೆಯ ವಸತಿ ಗೃಹ ಕಟ್ಟಡದ ಮೂರನೆ‌ ಮಹಡಿಯಲ್ಲಿ ಕಾಮಗಾರಿ ಮಾಡುತ್ತಿದ್ದ ವೇಳೆ ಕಟ್ಟಡದ‌ ಮೇಲೆ ಕೆಲಸ ಮಾಡುತ್ತಿದ್ದ ಕಾರ್ಮಿಕ ಆಸ್ಮಿಕವಾಗಿ ಕೆಳಗಡೆ ಬಿದ್ದು ಮೃತಪಟ್ಟಿದ್ದಾನೆ.

ಬಳಿಕ ಆತನಿಗೆ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ನಗರ ಠಾಣೆ ಪಿ.ಎಸ್.ಐ ನಾಗಪ್ಪ ಬಿ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.