ಸುದ್ದಿಬಿಂದು ಬ್ಯೂರೋ
ಕಾರವಾರ : ಬೈಕ್ ಮೇಲೆ ಶಾಲೆಗೆ ಹೋಗುತ್ತಿದ್ದ ಶಿಕ್ಷಕರೊಬ್ಬರ ಮೇಲೆ ಲಾರಿ ಹಾಯ್ದು ಶಿಕ್ಷಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರದ ಹಬ್ಬುವಾಡದಲ್ಲಿ ನಡೆದಿದೆ..

ಕಿನ್ನರದ ನಿವಾಸಿಯಾಗಿರುವ. ಉಮೇಶ ಗುನಗಿ (50) ಮೃತಪಟ್ಟಿರುವ ಶಿಕ್ಷಕರಾಗಿದ್ದಾರೆ. ಇವರು ಇಂದು ಬೆಳಿಗ್ಗೆ ತಂದೆಯವರನ್ನ ಚಿಕಿತ್ಸೆಗಾಗಿ ಕಾರವಾರದ ಸಿವಿಲ್ ಆಸ್ಪತ್ರೆ ದಾಖಲಿಸಿ ಬಳಿಕ ದೇವಳಮಕ್ಕಿ ಶಾಲೆಗೆ ತೆರಳುತ್ತಿದ್ದರು. ಈ ವೇಳೆ ಅತೀವೇಗ ಹಾಗೂ ಅಜಾಗರುಕತೆಯಿಂದ ಲಾರಿ ಚಲಾಯಿಸಿಕೊಂಡು ಬಂದ ಲಾರಿ ಚಾಲಕ ಶಿಕ್ಷಕನ ಮೇಲೆ ಹಾಯಿಸಿದ್ದು ಶಿಕ್ಷಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಅವೈಜ್ಞಾನಿಕವಾಗಿ ನಡೆಯುತ್ತಿರುವ ರಸ್ತೆ ಕಾಮಗಾರಿಯೇ ಈ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದು, ಕಾಮಗಾರಿ ಗುತ್ತಿಗೆ ಪಡೆದ ಕಂಪನಿ ಮುಖ್ಯಸ್ಥರು ಮತ್ತು ಅಧಿಕಾರಿಗಳು ಸ್ಥಳಕ್ಕೆ ಬರದ ಹೊರತು ಶವ ಎತ್ತಲು ಕೊಡುವುದಿಲ್ಲವೆಂದು ಆಕ್ರೋಶ ಹೊರಹಾಕುತ್ತಿದ್ದಾರೆ.ಸ್ಥಳದಲ್ಲಿ ಬೀಗುವಿನ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಣ ಮಾಡುತ್ತಿದ್ದಾರೆ.