ಸುದ್ದಿಬಿಂದು ಬ್ಯೂರೋ
ಕಾರವಾರ:ಬಿಜೆಪಿಯವರು ಗಲಭೆ ಮಾಡದೇ ಯಾವ ಎಲೆಕ್ಷನ್ ಗೆದ್ದಿದೆ, ಅವರು ಎಲೆಕ್ಷನ್‌ಗೋಸ್ಕರ ಏನ್ ಬೇಕಾದ್ರೂ ಮಾಡೋದಕ್ಕೆ ರೆಡಿ ಇದ್ದಾರೆ ಎಂದು ಕಾರವಾರದಲ್ಲಿ ಮೀನುಗಾರಿಕಾ ಸಚಿವ ಮಂಕಾಳು ವೈದ್ಯ ಹೇಳಿದ್ದಾರೆ. ಬಿಜೆಪಿಯವರದ್ದು ಮೂರು ಅಜಂಡವಿದೆ. ಶ್ರೀರಾಮನ ಪ್ರಿತಿಷ್ಠೆಯಾಗದೆ ಮಂತ್ರಾಕ್ಷತೆ ಕೊಡಲು ಹೊರಟಿದ್ದಾರೆಂದು ಸಚಿವ ಮಂಕಾಳು ವೈದ್ಯ ಹೇಳಿದ್ದಾರೆ‌.

ಸುಳ್ಳು ಹೇಳೋದು, ಗಲಭೆ ಮಾಡೋದು, ದೇವರ ಹೆಸರಲ್ಲಿ ಸುಳ್ಳು ಹೇಳಿಕೊಂಡು ರಾಜಕಾರಣ ಮಾಡುವುದು. ರಾಮನ ನಿಜಭಕ್ತರಾದರೇ ಹೀಗೆ ಮಾಡುವುದಿಲ್ಲ.ನಾನು‌ಕೂಡಾ ಶ್ರೀ ರಾಮನ ಭಕ್ತ…ನಾನು ಭಟ್ಕಳದಲ್ಲಿ ರಾಮ ಮಂದಿರ ಕಟ್ಟಿಸಿದ್ದೇನೆ.ಶ್ರೀ ರಾಮ ಸಮಸ್ತ ಹಿಂದುಗಳ ಆರಾಧ್ಯ.ಕೇವಲ ಬಿಜೆಪಿಗೆ ಮಾತ್ರ ಅಲ್ಲ ಎಂದು ಮಂಕಾಳ ವೈದ್ಯ ಹೇಳಿದ್ದಾರೆ.ಇನ್ನು ರಾಮಮಂದಿರ ಉದ್ಘಾಟನೆ ಆಗದೇ ಮಂತ್ರಾಕ್ಷತೆ ಕೊಡುತಿದ್ದಾರೆ.

ಪೂಜೆಯೇ ಆಗದೇ ಮಂತ್ರಾಕ್ಷತೆ ಹೇಗೆ ಕೊಡುತ್ತಾರೆ.ಅಕ್ಷತೆ ಕೊಟ್ಟು,ಮಂತ್ರಾಕ್ಷತೆ ಕೊಟ್ಟು ಕರೆಯುವುದೇನೋ ಸರಿ, ಮೋದಿ ಪೋಟೋ ಹಾಕಿ ಪ್ರಚಾರ ಮಾಡುವುದು ಏಕೆ. ಅಕ್ಷತೆ ಕೊಡುವಲ್ಲಿ ಮೋದಿ ವಿಚಾರ ಏಕೆ ಹೇಳುತ್ತಾರೆ, ಯಾಕೆ ಮೋದಿ, ಯೋಗಿಯ ಫೋಟೋ ಕಟೌಟ್ ಹಾಕಿದ್ದಾರೆ. ಇದು ಯಾರ ದುಡ್ಡು ಹಣ ನಾವು ಕೂಡ ಕೊಟ್ಟಿದ್ದೇವೆ, ಇದೆಲ್ಲಾ ನಾಟಕ ಬಿಜೆಪಿಯವರು ಬಂದ್ ಮಾಡುವುದು ಒಳ್ಳೆಯದು.

ಬಿಜೆಪಿಯವರದ್ದು ಬೋಗಸ್ ಭಕ್ತಿ. ನಿಜವಾದ ಭಕ್ತರು ಗಲಾಟೆ ಮಾಡುವುದಿಲ್ಲ. ರಾಜ್ಯದಲ್ಲಿ ನಾವು ಕೂಡ ಪೊಲೀಸ್ ಬಂದೋಬಸ್ತ್ ಮಾಡಿದ್ದೇವೆ ಎಂದು ಸಚಿವ ಮಂಕಾಳು ವೈದ್ಯ ಹೇಳಿದ್ದಾರೆ.