ಸುದ್ದಿಬಿಂದು ಬ್ಯೂರೋ
ಶಿರಸಿ : ರಾಜ್ಯದ ಬಿಜೆಪಿಯ ನೂತನ ಅಧ್ಯಕ್ಷರಾಗಿರುವ ಬಿ ವೈ ಎಸ್ ವಿಜಯೇಂದ್ರ ಅವರು ಜನವರಿ 23ರಂದು ಉತ್ತರಕನ್ನಡ ಜಿಲ್ಲೆಯ ಶಿರಸಿಗೆ ಆಗಮಿಸಲಿದ್ದಾರೆ‌.

ಅಂದು ನೂತನ ಅಧ್ಯಕ್ಷರಾಗಿರುವ ವಿಜಯೇಂದ್ರ ಅವರಿಗೆ ಉತ್ತರಕನ್ನಡ ಜಿಲ್ಲಾ ಬಿಜೆಪಿ ಘಟಕದಿಂದ ಸನ್ಮಾನ ಕಾರ್ಯಕ್ರಮ ಏರ್ಪಡಿಲಾಗಿದ್ದು, ಅದೇ ವೇದಿಕೆಯಲ್ಲಿ ಉತ್ತರಕನ್ನಡ ಜಿಲ್ಲೆಯ ಬಿಜೆಪಿ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಜರುಗಲಿದೆ‌..

ಸನ್ಮಾನ ಕಾರ್ಯಕ್ರಮದ ಬಳಿಕ ಲೋಕಸಭಾ ಚುನಾವಣೆಯ ಕುರಿತಾಗಿ ಜಿಲ್ಲೆಯ ಶಾಸಕರು ಹಾಗೂ ಪ್ರಮುಖರೊಂದಿದೆ ವಿಜಯೇಂದ್ರ ಸಭೆ ನಡೆಸಲಿದ್ದಾರೆ ಎನ್ನಲಾಗಿದ್ದು, ಅವರು ರಾಜಾಧ್ಯಕ್ಷರಾದ ಬಳಿಕ ಇದೆ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸುತ್ತಿದ್ದಾರೆ.