ಸುದ್ದಿಬಿಂದು ಬ್ಯೂರೋ
ಪಬೆಂಗಳೂರು : ಮಾಜಿ ಸಿ ಎಂ ಜಗದೀಶ ಶೆಟ್ಟರ್ ವಾಪಸ್ ಬಿಜೆಪಿಗೆ ಹೋದ ಬಳಿಕ ಲಕ್ಷ್ಮಣ ಸವದಿ ಕೂಡ ಬಿಜೆಪಿಗೆ ಮರಳಿದ್ದಾರೆ ಎನ್ನುವ ಚರ್ಚೆಗಳು ಆರಂಭವಾಗಿದೆ. ಈ ಬಗ್ಗೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ಸವದಿ ನಾನು ಬಿಜೆಪಿಗೆ ವಾಪಾಸ್ ಆಗುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಜಗದೀಶ್ ಶೆಟ್ಟರ್ ಯಾವ ಕಾರಣಕ್ಕೆ ವಾಪಸ್ ಬಿಜೆಪಿಗೆ ಹೋಗಿದ್ದಾರೆ ಎನ್ನುವುದು ಗೊತ್ತಿಲ್ಲ. ಇದುವರೆಗೆ ಬಿಜೆಪಿಯವರು ನನ್ನ ಸಂಪರ್ಕ ಮಾಡಿಲ್ಲ. ಮಾಡಿದರು ನಾನು ಅಲ್ಲಿಗೆ ಹೋಗಲ್ಲ‌. ನಾನು ಮೊದಲೆ ಕಾಂಗ್ರೆಸ್ ಗೆ ಬಂದಿದ್ದೇನೆ. ನಂತರ ಅಲ್ಲಿ ಟಿಕೆಟ್ ಸಿಕ್ಕಿಲ್ಲ ಅಂತಾ ಶೆಟ್ಟರ್ ಕಾಂಗ್ರೆಸ್ ಗೆ ಬಂದಿದ್ದಾರೆ. ಬಿಜೆಪಿಗೆ ಹೋಗುವ ಬಗ್ಗೆ ಶೆಟ್ಟರ್ ನನ್ನ ಜೊತೆ ಏನು ಮಾತನಾಡಿಲ್ಲ.
ಶೆಟ್ಟರ್ ಬಿಜೆಪಿಗೆ ಹೋಗಿರುವುದರಿಂದ ದೊಡ್ಡ ಬದಾವಣೆ ಏನು ಆಗುತ್ತದೆ ಅನಿಸುವುದಿಲ್ಲ.

ಅವರು ವೈಯಕ್ತಿಕ ಕಾರಣಕ್ಕಾಗಿ ಆ ನಿರ್ಧಾರ ಮಾಡಿರಬೇಕೇನೋ..ಆದರೆ ನನ್ನ ನಿರ್ಧಾರ ಸ್ಪಷ್ಟವಾಗಿದೆ ಎಂದು ಲಕ್ಷ್ಮಣ ಸವದಿ ತಿಳಿಸಿದ್ದಾರೆ.