ಸುದ್ದಿಬಿಂದು ಬ್ಯೂರೋ
ಕಾರವಾರ : ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಜಗದೀಶ್ ಶೆಟ್ಟರ್ ಇದೀಗ ವಾಪಸ್ ಬಿಜೆಪಿ ಸೇರ್ಪಡೆಗೊಂಡಿದ್ದು, ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಕೆನರಾ ಕ್ಷೇತ್ರದ ಮೇಲೆ ಕಣ್ಣಿಟ್ಟೇ ಬಿಜೆಪಿ ಸೇರ್ಪಡೆಗೊಂಡಿದ್ದಾರೆನ್ನುವ ಚರ್ಚೆ ಬಿಜೆಪಿ ಪಡಸಾಲೆಯೊಳಗೆ ಶುರುವಾಗಿದೆ.
ಹಾಲಿ ಸಂಸದರಾಗಿರುವ ಅನಂತಕುಮಾರ ಹೆಗಡೆ ಅವರಿಗೆ ಈ ಭಾರಿ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದ್ದು, ಈ ಕಾರಣಕ್ಕೆ ಅವರ ಸ್ಥಾನಕ್ಕೆ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನೀಡಿದರೆ ಸುಲಭವಾಗಿ ಅವರನ್ನ ಗೆಲ್ಲಿಸಬಹುದು ಎನ್ನುವದು ಬಿಜೆಪಿ ನಾಯಕರ ರಾಜಕೀಯ ಲೆಕ್ಕಾಚಾರ. ಜಗದೀಶ್ ಶೆಟ್ಟರ್ ಈ ಹಿಂದೆ ಉತ್ತರಕನ್ನಡ ಜಿಲ್ಲೆಯ ಉಸ್ತುವಾರಿ ಕೂಡ ಆಗಿ ಕಾರ್ಯನಿರ್ವಹಿಸಿದ್ದರು. ಜಿಲ್ಲೆಯ ಮತದಾರರ ನಾಡಿಮಿಡಿತವನ್ನ ಅವರು ಚೆನ್ನಾಗಿಯೇ ಅರಿತುಕೊಂಡಿದ್ದಾರೆ.
ಅದರ ಜೊತಗೆ ಅವರು ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದು, ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ಮುಂಡಗೋಡ ಸೇರಿದಂತೆ ಕೆಲ ಕ್ಷೇತ್ರದಲ್ಲಿ ಲಿಂಗಾಯತ ಮತದಾರರು ಹೆಚ್ಚಿನ ಪ್ರಮಾಣದಲ್ಲಿದ್ದಾರೆ. ಜೊತೆಗೆ ಜಿಲ್ಲೆಯಲ್ಲಿ ಸತತವಾಗಿ ಬಿಜೆಪಿ ಅಭ್ಯರ್ಥಿಯೇ ಗೆಲವು ಪಡೆಯುತ್ತಾ ಬಂದಿರುವ ಹಿನ್ನಲೆಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿ ಮರಳಿ ಬಿಜೆಪಿಗೆ ಬಂದಿರುವ ಶೆಟ್ಟರ್ ಅವರಿಗೆ ಉತ್ತರಕನ್ನಡ ಜಿಲ್ಲಾ ಲೋಕಸಭಾ ಟಿಕೆಟ್ ನೀಡಿದರೆ ಸುಲಭವಾಗಿ ಗೆಲುವು ಸಾಧಿಸಬಹುದು ಎನ್ನುವುದು ಬಿಜೆಪಿ ನಾಯಕರ ಲೆಕ್ಕಾಚಾರಚಾರದೊಂದಿದೆ ಶೆಟ್ಟರ್ ಅವರನ್ನ ಬಿಜೆಪಿಗೆ ಕರೆತರಲಾಗಿದೆ ಎನ್ನಲಾಗಿದೆ.