suddibindu.in
ಮುಂಡಗೋಡ: ಉತ್ತರ ಕನ್ನಡ(uttar kannada) ಜಿಲ್ಲೆಯ ಮುಂಡಗೋಡ ತಾಲೂಕಿನ ಜೋಗೇಶ್ವರ ಹಳ್ಳದ ಸಮೀಪ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಲಾರಿ ಸಂಪೂರ್ಣ ಜಖಂಗೊಂಡು ಚಾಲಕರಿಬ್ಬರೂ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಇದನ್ನೂ ಓದಿ:
- ಹೆಬ್ಬೆಟ್ಟು ಗಿರಾಕಿಗಳು ನಾವಲ್ಲ : ಕೆಡಿಪಿ ಸಭೆಯಲ್ಲಿ ಶಾಸಕ ಸೈಲ್ ಆಕ್ರೋಶ
- ಗೇರುಸೊಪ್ಪದ ವೀರಾಂಜನೇಯ ದರ್ಶನ ಪಡೆದ ಕ್ರಿಕೆಟ್ ಸ್ಟಾರ್ ಕೆ.ಎಲ್. ರಾಹುಲ್
- ಇನೋವಾ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಕಲ್ಬುರ್ಗಿಯಿಂದ ಪ್ರವಾಸಕ್ಕೆ ಬಂದ ವೇಳೆ ಘಟನೆ
(sirsi) ಶಿರಸಿ ಕಡೆಯಿಂದ ಬರುತ್ತಿದ್ದ ಲಾರಿ, ಮುಂಡಗೋಡ ಕಡೆಯಿಂದ ಹೊರಟಿದ್ದ ಲಾರಿ ನಿಯಂತ್ರಣ ತಪ್ಪಿ ಪರಸ್ಪರ ಮುಖಾಮುಕಿ ಡಿಕ್ಕಿಯಾಗಿದೆ. ಪರಿಣಾಮ ಲಾರಿ ಚಾಲಕರು ಇಬ್ಬರಿಗೂ ಗಾಯವಾಗಿದೆ.
ಇನ್ನು ಗಾಯಗೊಂಡ ಲಾರಿ ಚಾಲಕರನ್ನು ಕಲಬುರ್ಗಿಯ (Kalaburgi) ಮೌನೇಶ್ ಡೋಲಿ, ಶಿರಸಿಯ ಮಹೇಶ್ ಶಂಕರ್ ಪರಪರ್ ಅಂತಾ ಗುರುತಿಸಲಾಗಿದೆ. ಸದ್ಯ ಗಾಯಾಳುಗಳನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದ್ದು,ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.






