Priests resolve to let DK Shivakumar become CM
suddibindu.in
ಕಾರವಾರ : ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂದು ಗೋಕರ್ಣ ಆತ್ಮಲಿಂಗ ಪೂಜೆ ಸಲ್ಲಿಸುವ ವೇಳೆ ಅರ್ಚಕರಿಂದ ಸಂಕಲ್ಪ ಮಾಡಿದರು. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಡಿ ಕೆ ಶಿವಕುಮಾರ ಇಂದು ಗೋಕರ್ಣ ಮಹಾಬಲೇಶ್ವರ ದೇವಸ್ಥಾನಕ್ಕೆ ಆಗಮಿಸಿ ಪೂಜೆ ಸಲ್ಲಿಸಿದರು.
- ರಾಜ್ಯದಲ್ಲಿ ಹವಾಮಾನ ಬದಲಾವಣೆ; ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
- ಜನಮನ ರಂಜಿಸಿದ ಬಿಎಲ್ ಈವೆಂಟ್ಸ್ ಮತ್ತು ಪ್ರೊಡಕ್ಷನ್ ರಸಮಂಜರಿ : ಕರಾವಳಿ–ಮಲೆನಾಡು ತಂಡದಿಂದ ಸಂಗೀತ ರಸದೌತಣ
- ಕರಾವಳಿ–ಮಲೆನಾಡಿಗೆ ಹೊಸ ರೂಪ: ಸಿಎಂ ಡಿ.ಕೆ.ಶಿವಕುಮಾರ್
ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಅವರ ಪರ ಪ್ರಚಾರಕ್ಕೆ ಆಗಮಿಸಿದ ಡಿ ಕೆ ಶಿವಕುಮಾರ ಅವರು ಪ್ರಚಾರ ಸಭೆಯ ಪೂರ್ವದಲ್ಲಿ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ವೇಳೆ ಅರ್ಚಕರು ಡಿ.ಕೆ ಶಿವಕುಮಾರ್ ಮುಂದೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ದೇವರ ಮುಂದೆ ಸಂಕಲ್ಪ ಮಾಡಿಕೊಂಡಿದ್ದಾರೆ ಈ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ ಅರ್ಚಕರು ಹೇಳುವುದು ತಪ್ಪೇನಿಲ್ಲ.
ಇದನ್ನೂ ಓದಿ
ಈಗ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇದ್ದಾರೆ. ಅವರ ನಾಯಕತ್ವದಲ್ಲಿ ನಾವು ಮುಂದೆ ಹೋಗುತ್ತಿದ್ದೇವೆ. ಕೆಲವರು ನನ್ನನ್ನ ಸಿಎಂ ಆಗಲಿ ಎಂದು ಹೇಳುತ್ತಾರೆ.ಅವರ ಬಾಯಲ್ಲಿ ಬರುವುದನ್ನ ತಪ್ಪಿಸಲು ಸಾಧ್ಯವೇ.ಯಾರು ಏನೇ ಆಸೆ ಪಟ್ಟರು ಪಕ್ಷ ಅಂತಿಮವಾಗಿ ತಿರ್ಮಾನಿಸಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯದಲ್ಲಿ ಒಳ್ಳೆಯ ಮಳೆ ಬೆಳೆ ಆಗಲಿ ಎಂದು ಪ್ರಾರ್ಥಿಸಿಕೊಂಡಿದ್ದೇನೆ




