suddibindu.in
ಕುಮಟಾ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ರಾಜಕೀಯ ನಿವೃತ್ತಿ ಪಡೆದಿದ್ದ ಕುಮಟಾ ಕ್ಷೇತ್ರದ ಮಾಜಿ ಶಾಸಕಿ ಮಾತೃ ಪಕ್ಷಕ್ಕೆ ಮರಳಿದ್ದು, ನಾಳೆ ತಮ್ಮ ನಿವಾಸದಲ್ಲಿ ಬೆಂಬಲಿಗರ ಸಭೆ ಕರೆಯಲಾಗಿದೆ.
ಲೋಕಸಭಾ ಚುನಾವಣೆಯ ಹೊತ್ತಲ್ಲಿ ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ ಸಮುಖದಲ್ಲಿಂದು ಕಾಂಗ್ರೆಸ್ಗೆ ಮರಳಿದ್ದಾರೆ.ಇನ್ನೂ ಈ ಚುನಾವಣೆಯಲ್ಲಿ ತಮ್ಮ ಕ್ಷೇತ್ರದಲ್ಲಿ ಪಕ್ಷ ಸಂಘಟನೆಯನ್ನ ಚುರುಕುಗೊಳಿಸಬೇಕೆನ್ನುವ ಕಾರಣಕ್ಕಾಗಿ ನಾಳೆ (ಶನಿವಾರ) ಬೆಳಿಗ್ಗೆ 10ಗಂಟೆಗೆ ತಮ್ಮ ನಿವಾಸದಲ್ಲಿ ಬೆಂಬಲಿಗರ ಹಾಗೂ ಕಾರ್ಯಕರ್ತರ ಸಭೆ ಕರೆದಿದ್ದಾರೆ.
ಇದನ್ನೂ ಓದಿ
- ಸಿಎಂ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು; ಶೇಷಾದ್ರಿಪುರಂ ಖಾಸಗಿ ಆಸ್ಪತ್ರೆಗೆ ದಾಖಲು
- ನ 20ಕ್ಕೆ ಕಾರವಾರದಲ್ಲಿ ಕನಿಷ್ಠ ಪಿಂಚಣಿ ಹೆಚ್ಚಳಕ್ಕೆ ಆಗ್ರಹಿಸಿ ಸಮಾವೇಶ
- ಟೆಂಪೋ–ಟಿಪ್ಪರ್ ನಡುವೆ ಅಪಘಾತ, 12 ಪ್ರಯಾಣಿಕರಿಗೆ ಗಾಯ
ಈಹಿನ್ನಲೆಯಲ್ಲಿ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಬೆಂಬಲಿಗರು ಸಭೆಗೆ ಆಗಮಿಸುವಂತೆ ಕರೆ ನೀಡಿದ್ದಾರೆ. ಹೀಗಾಗಿ ನಾಳೆ ನಡೆಯುವ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬೆಂಬಲಿಗರು ಆಗಮಿಸುವ ನಿರೀಕ್ಷೆ ಇದೆ.







