suddibindu.in
ಕುಮಟಾ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ರಾಜಕೀಯ ನಿವೃತ್ತಿ ಪಡೆದಿದ್ದ ಕುಮಟಾ ಕ್ಷೇತ್ರದ ಮಾಜಿ ಶಾಸಕಿ ಮಾತೃ ಪಕ್ಷಕ್ಕೆ ಮರಳಿದ್ದು, ನಾಳೆ ತಮ್ಮ ನಿವಾಸದಲ್ಲಿ ಬೆಂಬಲಿಗರ ಸಭೆ ಕರೆಯಲಾಗಿದೆ.
ಲೋಕಸಭಾ ಚುನಾವಣೆಯ ಹೊತ್ತಲ್ಲಿ ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ ಸಮುಖದಲ್ಲಿಂದು ಕಾಂಗ್ರೆಸ್ಗೆ ಮರಳಿದ್ದಾರೆ.ಇನ್ನೂ ಈ ಚುನಾವಣೆಯಲ್ಲಿ ತಮ್ಮ ಕ್ಷೇತ್ರದಲ್ಲಿ ಪಕ್ಷ ಸಂಘಟನೆಯನ್ನ ಚುರುಕುಗೊಳಿಸಬೇಕೆನ್ನುವ ಕಾರಣಕ್ಕಾಗಿ ನಾಳೆ (ಶನಿವಾರ) ಬೆಳಿಗ್ಗೆ 10ಗಂಟೆಗೆ ತಮ್ಮ ನಿವಾಸದಲ್ಲಿ ಬೆಂಬಲಿಗರ ಹಾಗೂ ಕಾರ್ಯಕರ್ತರ ಸಭೆ ಕರೆದಿದ್ದಾರೆ.
ಇದನ್ನೂ ಓದಿ
- ಹಬ್ಬದ ಸಂಭ್ರಮದ ಬೆನ್ನಲ್ಲೇ ಸಾವಿನ ಸರಣಿ; ಒಂದೇ ಕುಟುಂಬದ ಮೂವರು ಸೇರಿ ಹಲವರು ಬಲಿ
- ದಾಂಡೇಲಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ನಲ್ಲಿ ಅವ್ಯವಸ್ಥೆ; ಗಬ್ಬು ನಾರುತ್ತಿರುವ ಸ್ವಿಮ್ಮಿಂಗ್ ಪೂಲ್
- ಇಡಗುಂಜಿ ವಿನಾಯಕ ನನ್ನ ಆರಾಧ್ಯ ದೇವರು; ಜನರ ಸಮಸ್ಯೆಗಳಿಗೆ ಸ್ಪಂದಿಸುವುದೇ ನನ್ನ ಧ್ಯೇಯ: ಮಂಕಾಳ ವೈದ್ಯ
ಈಹಿನ್ನಲೆಯಲ್ಲಿ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಬೆಂಬಲಿಗರು ಸಭೆಗೆ ಆಗಮಿಸುವಂತೆ ಕರೆ ನೀಡಿದ್ದಾರೆ. ಹೀಗಾಗಿ ನಾಳೆ ನಡೆಯುವ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬೆಂಬಲಿಗರು ಆಗಮಿಸುವ ನಿರೀಕ್ಷೆ ಇದೆ.




