suddibindu.in
Kumta:ಕುಮಟಾ: ಸುಡು ಬಿಸಿಲಿನಿಂದ ಪರಿತಪಿಸುತ್ತಿದ್ದ ಉತ್ತರಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮಳೆರಾಯ ತಂಪೆರೆದಿದ್ದಾನೆ. ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ.
ಜಿಲ್ಲೆಯ ಕುಮಟಾ,ಅಂಕೋಲಾ,ಹೊನ್ನಾವರ ಸೇರಿದಂತೆ ಕರಾವಳಿಯ ತಾಲೂಕಿನ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಮಳೆ ಉಂಟಾಗಿದೆ. ಕಳೆದ ಎರಡು ದಿನಗಳಿಂದ ಭಾರೀ ಮೊಡಕವಿದ ವಾತಾವಣ ಇತ್ತು.ವಿಪರೀತವಾದ ಬಿಸಿಲಿನ ಧಗೆಗೆ ಕಂಗೆಟ್ಟಿದ್ದ ಜನತೆಗೆ ತಂಪಾಗಿಸಿದ ವರುಣ ತಂಪೆರೆದಿದೆ.ಕಳೆದೆರಡು ದಿನಗಳಿಂದ ಘಟ್ಟದ ಮೇಲಿನ ತಾಲ್ಲೂಕುಗಳಲ್ಲಿ ಅಬ್ಬರಿಸಿತ್ತು. ಇಂದು ಬೆಳ್ಳಂಬೆಳಿಗ್ಗೆ ಕುಮಟಾ, ಅಂಕೋಲಾ ಭಾಗದಲ್ಲಿ ಮಳೆ ಸುರಿಯುತ್ತಿದ್ದು ತಂಪೆರೆದಿದೆ..
ಇದನ್ನೂ ಓದಿ
- ಗೋವಾಕ್ಕೆ ತೆರಳುತ್ತಿದ್ದ ಪ್ರವಾಸಿಗರ ವಾಹನ ಪಲ್ಟಿ : ಚಾಲಕ ಗಂಭೀರ
- ಕೆಡಿಸಿಸಿ ಬ್ಯಾಂಕ್ ಚುನಾವಣೆ ಶಿವರಾಮ ಹೆಬ್ಬಾರ್ ಎಚ್ಚರಿಕೆ ಹೆಜ್ಜೆ, ಮಂಕಾಳ ವೈದ್ಯರಿಗೆ ಅಧ್ಯಕ್ಷ ಸ್ಥಾನ ಸಾಧ್ಯತೆ
- ಉತ್ತರಕನ್ನಡದಲ್ಲಿ ಸಹಾಯಕ ಕಮಿಷನರ್ ಅಧಿಕಾರಿಗಳ ಕೊರತೆ: ಸಂಕಷ್ಟದಲ್ಲಿ ಸಿಲುಕಿರುವ ಜನತೆ
ಇನ್ನೂ ಜಿಲ್ಲೆಯಲ್ಲಿ ಎಪ್ರಿಲ್ 22ರ ವರೆಗೆ ಮಳೆ ಉಂಟಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿರಸಿ, ಸಿದ್ದಾಪುರ, ಮುಂಡಗೋಡ, ಹಳಿಯಾಳ ಭಾಗದಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆ ಉಂಟಾಗುತ್ತಿದೆ.ಇನ್ನೂ ಎರಡು ದಿನ ಜಿಲ್ಲೆಯಲ್ಲಿ ಭಾರೀ ಮಳೆ ಉಂಟಾಗಲಿದೆ ಎಂದು ಈಗಾಗಲೇ ಹವಮಾನ ಇಲಾಖೆ ಸೂಚನೆ ನೀಡಿದೆ.