suddibindu.in
Karwar:ಕಾರವಾರ: ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಅವರನ್ನು (Student Neha Hiremath) ಬರ್ಬರವಾಗಿ ಹತ್ಯೆ ಮಾಡಿರುವುದು ನಾಗರಿಕ ಸಮಾಜವೇ ತಲೆ ತಗ್ಗಿಸುವ ಕೃತ್ಯವಾಗಿದೆ. ಈ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಮತ್ತು ಮೃತ ಯುವತಿಯ ಕುಟುಂಬಕ್ಕೆ ಈ ಸಾವಿನ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ದೇವರು ನೀಡಲಿ ಎಂದು ಡಾ.ಅಂಜಲಿ ನಿಂಬಾಳ್ಕರ್ ಪ್ರಾರ್ಥಿಸಿದ್ದಾರೆ.
ಇಂತಹ ದುಷ್ಕೃತ್ಯವನ್ನು ಎಸಗುವವರಿಗೆ ಸಮಾಜದಲ್ಲಿ ಜೀವಿಸುವ ಯಾವುದೇ ಅರ್ಹತೆಯಿಲ್ಲ.ಇಂತಹ ಅಪರಾಧಗಳಿಗೆ ಅತ್ಯಂತ ಕಠೋರ ಶಿಕ್ಷೆಯನ್ನೇ ನೀಡಬೇಕು.ಆಗ ಮಾತ್ರ ತಪ್ಪು ಮಾಡುವ ರಾಕ್ಷಸರಿಗೆ ಭಯ ಹುಟ್ಟುತ್ತದೆ. ನೇಹಾಳ ಮನೆಯವರಿಗೆ ಆಗಿರುವ ನೋವು ಮತ್ಯಾವ ತಂದೆ ತಾಯಿಗೂ ಬರಬಾರದು. ನೇಹಾ ನಮ್ಮ ಮನೆ ಮಗಳು. ಕೊಲೆಯಾಗಿರುವ ನೇಹಾಳಿಗೆ ನ್ಯಾಯ ಸಿಗಲೇಬೇಕು. ಹಾಗೆ ಕೊಲೆಗಾರನಿಗೆ ಕಾನೂನಿನ ಪ್ರಕಾರವೇ ಆದಷ್ಟು ಶೀಘ್ರ ಗಲ್ಲು ಶಿಕ್ಷೆ ವಿಧಿಸಬೇಕು.ಕೊಲೆಗಡುಕ ಫಯಾಜ್ ನಂಥ ಕ್ರಿಮಿಗಳು ಎಲ್ಲ ಜಾತಿ ಧರ್ಮದಲ್ಲೂ ಇದ್ದಾರೆ.
ಇದನ್ನೂ ಓದಿ
- ಲಿಂಗಾಯತ ಶಾಸಕರು ಬಿಜೆಪಿ ತೊರೆದು ಬನ್ನಿ : ಜಯಮೃತ್ಯುಂಜಯ ಸ್ವಾಮೀಜಿ ಕರೆ
- Today gold and silver rate |ಚಿನ್ನದ ಬೆಲೆಯಲ್ಲಿ ಗಣನೀಯ ಏರಿಕೆ : ಬಂಗಾರ ಖರೀದಿಸುವವರಿಗೆ ಬಿಗ್ ಶಾಕ್
- ಮಾ.30ಕ್ಕೆ ಬರ್ಗಿಯಲ್ಲಿ ಸುಲುಗಾಯಿ ಪಂದ್ಯಾವಳಿ
ಹೀಗಾಗಿ ಇದಕ್ಕೆ ಧರ್ಮ, ಜಾತಿಯ ಲೇಪನ ಹಚ್ಚಿ ಸಮಾಜದಲ್ಲಿ ಸಂಘರ್ಷದ ವಾತಾವರಣ ನಿರ್ಮಿಸುವುದು ಸರಿಯಲ್ಲ. ಇಂಥ ಕೊಲೆಗಳನ್ನು ಧರ್ಮದ ನೆಲೆಯಲ್ಲಿ ಇಟ್ಟು ಪರಸ್ಪರ ದ್ವೇಷ, ಪ್ರತೀಕಾರದ ಭಾವ ಮೂಡಿಸುವುದು ಕೂಡ ಅಪರಾಧವೇ ಆಗುತ್ತದೆ.ಇಂಥ ಕೊಲೆಗಳನ್ನು ರಾಜಕೀಯ ಕಾರಣಕ್ಕೆ ಬಳಸಿಕೊಳ್ಳುವುದು ಕೂಡ ಹೇಯತನ. ಇಂಥವರಿಗೆ ಆದ ಘಟನೆಯ ನೋವಿಗಿಂತ ಹೆಚ್ಚಾಗಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಸ್ವಾರ್ಥವೇ ಹೆಚ್ಚಾಗಿರುತ್ತದೆ. ಇಂಥವರ ಬಗ್ಗೆ ಕೂಡ ಸಮಾಜ ಎಚ್ಚರ ವಹಿಸಬೇಕು.
ಹುಬ್ಬಳ್ಳಿ ಪೊಲೀಸರು (Hubli police)ಕೊಲೆ ನಡೆದ ಒಂದೇ ಗಂಟೆಯೊಳಗೆ ಆರೋಪಿ ಫಯಾಜ್ ನನ್ನು ದಸ್ತಗಿರಿ ಮಾಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.ಇದಕ್ಕಾಗಿ ಹುಬ್ಬಳ್ಳಿ ಪೊಲೀಸರನ್ನು ನಾನು ಅಭಿನಂದಿಸುತ್ತೇನೆ. ಇಂಥ ಪ್ರಕರಣಗಳು ನಡೆದಾಗ ಫಾಸ್ಟ್ ಟ್ರಾಕ್ ಕೋರ್ಟ್ ಗಳಲ್ಲಿ ಆದಷ್ಟು ಶೀಘ್ರ ವಿಚಾರಣೆ ನಡೆಯುವಂತೆ ಮಾಡಿ,ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತಾಗಬೇಕು.