suddibindu.in
ಶಿರಸಿ : SSLC ಫಲಿತಾಂಶ ಇಂದು ಪ್ರಕಟವಾಗಿದ್ದು, ದಕ್ಷೀಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದರೆ. ಉಡುಪಿ ಜಿಲ್ಲೆ ೨ನೇ ಸ್ಥಾನ ಪಡೆದಿದ್ದರೆ ಶಿವಮೊಗ್ಗ ಮೂರನೇ ಸ್ಥಾನ ಪಡೆದುಕೊಂಡಿದೆ. ಯಾದಗಿರಿ ಜಿಲ್ಲೆ ಕೊನೆ ಸ್ಥಾನ ಪಡೆದಿದೆ.ಇನ್ನೂ ಉತ್ತರಕನ್ನಡ ಜಿಲ್ಲೆಯ ಮೂವರು ವಿದ್ಯಾರ್ಥಿಗಳು ರಾಜ್ಯಕ್ಕೆ ದ್ವೀತಿಯ ಸ್ಥಾನ ಪಡೆದುಕೊಂಡಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಶಿರಸಿ ಶೈಕ್ಷಣಿಕ ಜಿಲ್ಲೆಯ ವಿದ್ಯಾರ್ಥಿಗಳಾದ ನಗರದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ದರ್ಶನ್‌ ಭಟ್‌, ಗೋಳಿ ಪ್ರೌಢ ಶಾಲೆಯ ಚಿನ್ಮಯ ಹೆಗಡೆ, ಹಾಗೂ ಭೈರುಂಬೆ ಶ್ರೀರಾಮ ಕೆ,ಎಂ ರಾಜ್ಯಕ್ಕೆ ದ್ವೀತಿಯ ಸ್ಥಾನ ಪಡೆದುಕೊಂಡಿದ್ದಾರೆ, ಅದೆ ರೀತಿ ಶಿರಸಿಯ ಗೋಳಿ ಪ್ರೌಢ ಶಾಲೆಯ ತೃಪ್ತಿ ಗೌಡ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಶಾರದಾಂಬಾ ಆಂಗ್ಲ ಮಾಧ್ಯಮ ಭೈರುಂಬೆ ಪ್ರೌಢ ಶಾಲೆಯಲ್ಲಿ ಓದಿದ ಶ್ರೀರಾಮ್‌ ಕೆ ಎಂ ೬೨೬ಕ್ಕೆ ೬೨೪ ಅಂಕ ಪಡೆದುಕೊಂಡಿದ್ದಾರೆ, ಗೋಳಿ ಪ್ರೌಢಶಾಲೆಯ ವಿದ್ಯಾರ್ಥಿನಿ ಚಿನ್ಮಯ ಶ್ರೀಪಾದ ಹೆಗಡೆ ೬೨೫ಕ್ಕೆ ೬೨೪ ಅಂಕ ಪಡೆದುಕೊಂಡಿದ್ದಾಳೆ ಇನ್ನೂ ಮಾರಿಕಾಂಬಾ ಪ್ರೌಢ ಶಾಲೆಯ ದರ್ಶನ್‌ ಭಟ್‌ ಕೂಡ ೬೨೫ಕ್ಕೆ ೬೨೪ ಅಂಕಗಳನ್ನ ಪಡೆಯುವ ಮೂಲಕ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾರೆ. ಇನ್ನೂ ಶಿರಸಿಯ ಸಿದ್ದಿವಿನಾಯಕ ಪ್ರೌಢಶಾಲೆಯ ತೃಪ್ತಿ ಗೌಡ ೬೨೫ಕ್ಕೆ ೬೨೩ ಅಂಕವನ್ನ ಗಳಿಸುವ ಮೂಲಕ ರಾಜ್ಯಕ್ಕೆ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಉತ್ತಮ ಅಂಕ ಪಡೆದ ಹಿನ್ನೆಯಲ್ಲಿ ವಿದ್ಯಾರ್ಥಿಗಳ ಪಾಲಕರು ತಮ್ಮ ಮಕ್ಕಳಿಗೆ ಸಿಹಿ ನೀಡಿವ ಮೂಲಕ ಸಂಭ್ರಮ ಹಚ್ಚಿಕೊಂಡಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಶಿಕ್ಷಕರು ಹಾಗೂ ಗ್ರಾಮಸ್ಥರು ಅಂಭಿನಂದಿಸಿದ್ದಾರೆ.

ಶಾಸಕರಿಂದ ಅಭಿನಂದನೆ
ರಾಜ್ಯಮದಲ್ಲಿ ನಾಲ್ವರು ವಿದ್ಯಾರ್ಥಿಗಳು ಮಾಡಿರುವ ಸಾಧನೆಗೆ ಸ್ಥಳೀಯ ಶಾಸಕ ಭೀಮಣ್ಣ ನಾಯ್ಕ ಅಭಿನಂದನೆ ಸಲ್ಲಿಸಿದ್ದು, ವಿದ್ಯಾಋತೀಗಳ ಈ ಸಾಧನೆ ವೈಯಕ್ತಿಕವಾಗಿ ತೃಪ್ತಿ ತಂದಿದೆ ಎಂದಿದ್ದಾರೆ.