suddibindu.in
ಹೊನ್ನಾವರ: ಉತ್ತರಕನ್ನಡ ಜಿಲ್ಲೆಯಲ್ಲಿ ಒಂದು ಸ್ಪೆಷಾಲಿಟಿ ಆಸ್ಪತ್ರೆ ಬೇಕೆನ್ನುವುದು ಜಿಲ್ಲೆಯ ಜನರ ಬಹುವರ್ಷಗಳ ಬೇಡಿಕೆಯಾಗಿದ್ದು, ಆದರೆ ಅದು ಇಂದು ಯಶಸ್ವಿಯಾಗಿದೆ. ಹೊನ್ನಾವರ ತಾಲೂಕಿನ ಅಳ್ಳಂಕಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಬಂಗಾರಮಕ್ಕಿ ಹಾಗೂ ಬೆಂಗಳೂರಿನ ಸುಧೀಕ್ಷಾ ಹೆಲ್ತ್ ಕೇರ್ ನ ಸಂಸ್ಥೆಯ ಸಹಯೋಗದಲ್ಲಿಂದು ಅಳ್ಳಂಕಿಯಲ್ಲಿ ಮಹಾತ್ವಾಕಾಂಕ್ಷೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕಟ್ಟಡಕ್ಕೆ ಶಂಕುಸ್ಥಾಪನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾನಾಡಿದ ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಧರ್ಮಾಧಿಕಾರಿ ಶ್ರೀ ಮಾರುತಿ ಗುರೂಜಿ ಸದ್ಯ ಇಲ್ಲಿ 150 ಹಾಸಿಗೆ ಆಸ್ಪತ್ರೆ ಮಾಡಿ ಕ್ರಮೇಣ ಹಂತ ಹಂತವಾಗಿ ಜಾಸ್ತಿ ಹಾಸಿಗೆಯ ಆಸ್ಪತ್ರೆ ವ್ಯವಸ್ಥೆ ಮಾಡಲಾಗುವುದು ಎಂದರು.

ಸುಧೀಕ್ಷಾ ಹೆಲ್ತ್ ಕೇರ್ ನ ಸಿಎಂಡಿ ಡಾ. ಸುಬ್ರಹ್ಮಣ್ಯಂ ಶರ್ಮಾ ಗೌರವರಂ‌ ಅವರು ಮಾತನಾಡಿ, ಸುವ್ಯವಸ್ಥೆಯ, ಉನ್ನತ ದರ್ಜೆಯ ಆಸ್ಪತ್ರೆಯನ್ನು ಈ ಜಿಲ್ಲೆಗೆ ಕೊಡುಗೆಯಾಗಿ ನೀಡಲಾಗುವುದು. ಜರ್ಮನಿಯಲ್ಲಿ ತಯಾರಾದ ವೈದ್ಯಕೀಯ ಪರಿಕರಗಳನ್ನು, ಯಂತ್ರಗಳನ್ನು ಈ ಆಸ್ಪತ್ರೆಯಲ್ಲಿ ಬಳಸಲಾಗುವುದು ಎಂದರು‌.

ಆಸ್ಪತ್ರೆಗೆ ಬೇಕಾಗುವ ತಜ್ಞ ವೈದ್ಯರನ್ನು ಹೇಗೆ ತರುತ್ತೀರಿ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುಬ್ರಹ್ನಣ್ಯಂ ಈಗಾಗಲೇ ಸಾವಿರಾರು ವೈದ್ಯರು ಇಲ್ಲಿ ಸೇವೆ ನೀಡಲು ತಮ್ಮನ್ನು ಸಂಪರ್ಕಿಸುತ್ತಿದ್ದಾರೆ. ಉತ್ತರ ಕನ್ನಡ ಜಿಲ್ಲೆಯವರೇ ಆಗಿದ್ದು ಹೊರ ಪ್ರಾಂತ್ಯದಲ್ಲಿದ್ದ ತಜ್ಞ ವೈದ್ಯರು ಈ ಜಿಲ್ಲೆಯಲ್ಲಿ ಸೇವೆ ಸಲ್ಲಿಸಲು ಉತ್ಸಾಹದಲ್ಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಹಲವು ಗಣ್ಯರು ಪಾಲ್ಗೊಂಡರು. ಇನ್ನು ಕೆಲವೇ ಕ್ಷಣದಲ್ಲಿ ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಶ್ರೀ ವೀರಾಂಜನೇಯ ಸಭಾಭವನದಲ್ಲಿ ಶಂಕುಸ್ಥಾಪನೆ ನಿಮಿತ್ತ ಸಾರ್ವಜ‌ನಿಕ ಸಮಾರಂಭ ನಡೆಯಲಿದೆ