suddibindu.in
ಭಟ್ಕಳ: ಹೊಳೆಯಲ್ಲಿ ಸ್ನಾನ ಮಾಡಲು ಹೋಗಿದ್ದ ಹದಿನೈದು ಮಂದಿಗಳ ಪೈಕಿ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆ ಹೊಳೆಯಲ್ಲಿ ನಡೆದಿದೆ.
- ಜ್ಯೋತಿಷಿ ಕಮಲಾಕರ್ ಭಟ್ ಸೇರಿ ಏಳು ಆರೋಪಿಗಳ ಮಧ್ಯಂತರ ಜಾಮೀನು ಅರ್ಜಿ ವಜಾ
- ಸಚಿವರ ಪಟ್ಟಿ ಆಯ್ಕೆಗೆ ತೆರೆ : ಉತ್ತರಕನ್ನಡಕ್ಕೆ ಮಂಕಾಳ್ ವೈದ್ಯ ಬಹುತೇಕ ಖಚಿತ
- ಕಾವೇರಿ ವಿಚಾರ : ಭಾನುವಾರ ಸರ್ವಪಕ್ಷ ಸಭೆ: ಸಿಎಂ ಡಿ ಕೆ ಶಿವಕುಮಾರ್
ಸೂರಜ್ ನಾಯ್ಕ್ (15),ಪಾರ್ವತಿ ಶಂಕರ ನಾಯ್ಕ (35) ಸ್ನಾನ ಮಾಡುವಾಗ ನೀರಿನಲ್ಲಿ ಮುಳುಗಿ ಮೃತಪಟ್ಟ ವ್ಯಕ್ತಿಗಳಾಗಿದ್ದಾರೆ. ಮೃತರು ಕಂಡೆಕೋಡ್ಲು ನಿವಾಸಿಗಳಾಗಿದ್ದಾರೆ. 15ಕ್ಕೂ ಹೆಚ್ಚು ಮಂದಿ ಸೇರಿ ಹೊಳೆಯಲ್ಲಿ ಸ್ನಾನ ಮಾಡಲು ತೆರಳಿದ್ದರು. ಈ ವೇಳೆ ಕಾಲು ಜಾರಿ ಇಬ್ಬರೂ ನೀರಿನಲ್ಲಿ ಮುಳುಗಡೆಯಾಗಿ ಮೃತಪಟ್ಟಿದ್ದಾರೆ. ಮೃತರ ಇಬ್ಬರೂ ಶವವನ್ನ ಹೊರತೆಗೆಯಲಾಗಿದೆ. ಭಟ್ಕಳ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ.




