suddibindu. in
ಕಾರವಾರ: ಎವರೆಸ್ಟ್ ಫಿಶ್ ಕರಿ ಮಸಾಲೆಯ ಆಮದನ್ನು ಸಿಂಗಾಪೂರ ಸರ್ಕಾರ ನಿಷೇಧಿಸಿದ ಬೆನ್ನಲ್ಲೇ ಇದೀಗ ಎವರೆಸ್ಟ್ ಚಿಕನ್ ಮಸಾಲಾವನ್ನು ಬಳಸದಂತೆ ಉತ್ತರ ಕನ್ನಡ ಜಿಲ್ಲೆ ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ್ ಸೂಚನೆ ನೀಡಿದ್ದಾರೆ..
- ಜನಮನ ರಂಜಿಸಿದ ಬಿಎಲ್ ಈವೆಂಟ್ಸ್ ಮತ್ತು ಪ್ರೊಡಕ್ಷನ್ ರಸಮಂಜರಿ : ಕರಾವಳಿ–ಮಲೆನಾಡು ತಂಡದಿಂದ ಸಂಗೀತ ರಸದೌತಣ
- ಕರಾವಳಿ–ಮಲೆನಾಡಿಗೆ ಹೊಸ ರೂಪ: ಸಿಎಂ ಡಿ.ಕೆ.ಶಿವಕುಮಾರ್
- ಗೋಕರ್ಣದಲ್ಲಿ ‘ಚಿನ್ನದ ಕಳ್ಳ’ನ ಬೇಟೆ: ಆರೋಪಿಯ ಬಂಧನ, ಮಾಲು ವಶ
ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಎಥಿಲಿನ್ ಆಕ್ಸೆಡ್ ಪ್ರಮಾಣ ಹೆಚ್ಚಾಗಿರುವುದರಿಂದ ಇದನ್ನು ಬಳಸದಂತೆ ಅಧಿಕಾರಿಗಳು ಸೂಚಿಸಿದ್ದಾರೆ. ವರದಿಯಲ್ಲಿ ಮೆಣಸಿನಪುಡಿಗೆ ಬಳಸುವ ಕೀಟನಾಶಕ ಎಥಿಲಿನ್ ಆಕ್ಸೆಡ್ ಪ್ರಮಾಣ ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಹೆಚ್ಚಾಗಿದೆ ಎಂದು ಹೇಳಲಾಗಿದೆ.
ಮಸಲಾ ಪದಾರ್ಥದಲ್ಲಿ ಎಥಿಲಿನ್ ಆಕ್ಸೆಡ್ ಪ್ರಮಾಣ ಕೇವಲ ಶೇ.0.01ರಷ್ಟು ಇರಬೇಕು. ಆದರೆ ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಶೇ.3.93ರಷ್ಟು ಪ್ರಮಾಣದಲ್ಲಿದೆ. ಇಷ್ಟೊಂದು ಪ್ರಮಾಣದಲ್ಲಿ ಎಥಿಲಿನ್ ಆಕ್ಸೆಡ್ ಬಳಕೆ ಹಾನಿಕಾರಕ. ಇದು ಆರೋಗ್ಯದ ಮೇಲೆ ಪರಿಣಾಮ ಆಗಿಯೇ ಆಗುತ್ತದೆ ಎಂದು ಉತ್ತರ ಕನ್ನಡ ಜಿಲ್ಲೆ ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ್ ಹೇಳಿದ್ದಾರೆ.
ಈ ಸಂಬಂಧ ಈಗಾಗಲೇ ಎವರೆಸ್ಟ್ ಮಸಾಲಾ ಕಂಪನಿಗೆ ನೋಟಿಸ್ ನೀಡಿ ಚಿಕನ್ ಮಸಾಲಾ ಪಾಕೆಟ್ ಸರಬರಾಜು ನಿಲ್ಲಿಸಬೇಕೆಂದು ಹೇಳಲಾಗಿದೆ. ಅದಲ್ಲದೆ ಅಂಗಡಿಗಳಿಗೆ ಪೊರೈಸಿದ ಮಸಾಲೆಯನ್ನು ವಾಪಸ್ಸು ಪಡೆಯುವಂತೆ ಉಲ್ಲೇಖಿಸಲಾಗಿದೆ.




