suddibindu. in
ಕಾರವಾರ: ಎವರೆಸ್ಟ್ ಫಿಶ್ ಕರಿ ಮಸಾಲೆಯ ಆಮದನ್ನು ಸಿಂಗಾಪೂರ ಸರ್ಕಾರ ನಿಷೇಧಿಸಿದ ಬೆನ್ನಲ್ಲೇ ಇದೀಗ ಎವರೆಸ್ಟ್ ಚಿಕನ್ ಮಸಾಲಾವನ್ನು ಬಳಸದಂತೆ ಉತ್ತರ ಕನ್ನಡ ಜಿಲ್ಲೆ ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ್ ಸೂಚನೆ ನೀಡಿದ್ದಾರೆ..
- “ಸ್ವಾತಂತ್ರ್ಯ ಹೋರಾಟಗಾರ ನಾರಾಯಣ ನಾಯ್ಕ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ಗಿಡ ವಿತರಿಸಿದ ಪ್ರಶಾಂತ ನಾಯ್ಕ”
- ಗೃಹಲಕ್ಷ್ಮಿ ಫಲಾನುಭವಿಗಳಿಗೆ ಮರು ಅರ್ಜಿ ಕಡ್ಡಾಯ : ರಾಜ್ಯ ಸರ್ಕಾರದಿಂದ ಮರುಪರಿಶೀಲನೆಗೆ ಸಿದ್ಧತೆ
- “ಕಾಲೇಜು ಶುಲ್ಕ ಕಟ್ಟಲು ಉಳಿಸಿದ್ದ ₹10 ಸಾವಿರ ವಾಪಸ್ ಸಿಗಲಿಲ್ಲ; ಮನನೊಂದು 19ರ ವಿದ್ಯಾರ್ಥಿನಿ ಆತ್ಮಹತ್ಯೆ
ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಎಥಿಲಿನ್ ಆಕ್ಸೆಡ್ ಪ್ರಮಾಣ ಹೆಚ್ಚಾಗಿರುವುದರಿಂದ ಇದನ್ನು ಬಳಸದಂತೆ ಅಧಿಕಾರಿಗಳು ಸೂಚಿಸಿದ್ದಾರೆ. ವರದಿಯಲ್ಲಿ ಮೆಣಸಿನಪುಡಿಗೆ ಬಳಸುವ ಕೀಟನಾಶಕ ಎಥಿಲಿನ್ ಆಕ್ಸೆಡ್ ಪ್ರಮಾಣ ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಹೆಚ್ಚಾಗಿದೆ ಎಂದು ಹೇಳಲಾಗಿದೆ.
ಮಸಲಾ ಪದಾರ್ಥದಲ್ಲಿ ಎಥಿಲಿನ್ ಆಕ್ಸೆಡ್ ಪ್ರಮಾಣ ಕೇವಲ ಶೇ.0.01ರಷ್ಟು ಇರಬೇಕು. ಆದರೆ ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಶೇ.3.93ರಷ್ಟು ಪ್ರಮಾಣದಲ್ಲಿದೆ. ಇಷ್ಟೊಂದು ಪ್ರಮಾಣದಲ್ಲಿ ಎಥಿಲಿನ್ ಆಕ್ಸೆಡ್ ಬಳಕೆ ಹಾನಿಕಾರಕ. ಇದು ಆರೋಗ್ಯದ ಮೇಲೆ ಪರಿಣಾಮ ಆಗಿಯೇ ಆಗುತ್ತದೆ ಎಂದು ಉತ್ತರ ಕನ್ನಡ ಜಿಲ್ಲೆ ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ್ ಹೇಳಿದ್ದಾರೆ.
ಈ ಸಂಬಂಧ ಈಗಾಗಲೇ ಎವರೆಸ್ಟ್ ಮಸಾಲಾ ಕಂಪನಿಗೆ ನೋಟಿಸ್ ನೀಡಿ ಚಿಕನ್ ಮಸಾಲಾ ಪಾಕೆಟ್ ಸರಬರಾಜು ನಿಲ್ಲಿಸಬೇಕೆಂದು ಹೇಳಲಾಗಿದೆ. ಅದಲ್ಲದೆ ಅಂಗಡಿಗಳಿಗೆ ಪೊರೈಸಿದ ಮಸಾಲೆಯನ್ನು ವಾಪಸ್ಸು ಪಡೆಯುವಂತೆ ಉಲ್ಲೇಖಿಸಲಾಗಿದೆ.




