suddibindu.in
ಗೋಕರ್ಣ : ಪ್ರವಾಸಿಗರನ್ನ ಹೊತ್ತೋಯ್ದ ಬೋಟ್ ಮುಳುಗಡೆಯಾಗಿ ಬೋಟ್ನಲ್ಲಿದ್ದ 40ಮಂದಿ ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾದ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿಯಲ್ಲಿ ನಡೆದಿದೆ.
- ಡ್ರಾಮಾ ಜೂನಿಯರ್ಸ್ ಸೂರಜ್ ಅಜ್ಜಿ ವಿಧಿವಶ: ಜನಮನ ಗೆದ್ದ ‘ರೀಲ್ಸ್ ಅಜ್ಜಿ’ ಇನ್ನು ನೆನಪು ಮಾತ್ರ
- ಗೋಪಾಲಕೃಷ್ಣ ಹತ್ಯೆ ಯತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಪ್ರಭಾವಿ ವ್ಯಕ್ತಿಯ ಹೆಸರು ಪರೋಕ್ಷವಾಗಿ ಇಂಗಿತ ವ್ಯಕ್ತಪಡಿಸಿದ ನಾಯಕ”
- ಉಪಚುನಾವಣೆಗೂ ಸಿಎಂ ಸ್ಥಾನಕ್ಕೂ ಸಂಬಂಧವಿಲ್ಲ: ಸಿಎಂ ಸ್ಪಷ್ಟನೆ
ರವಿವಾರ ರಜಾ ದಿನವಾಗಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದರು. ಘಟನೆಯಲ್ಲಿ ಬೋಟಿನಲ್ಲಿದ್ದ 40ಮಂದಿ ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬೋಟ್ ಮುಡಂಗಿಯ ಗಣೇಶ್ ಎಂಬುವವರಿಗೆ ಸೇರಿದ್ದಾಗಿದೆ. ಘಟನೆ ನಡೆಯುತ್ತಿದ್ದಂತೆ ಕರಾವಳಿ ಕಾವಲು ಪಡೆ ಸಿಬ್ಬಂದಿಗಳು ಮತ್ತು ಸ್ಥಳೀಯ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಎಲ್ಲರನ್ನು ರಕ್ಷಣೆ ಮಾಡಿದ್ದಾರೆ.
ಬೋಟ್ನಲ್ಲಿ ಮಿತಿಗಿಂತ ಹೆಚ್ಚಿನ ಪ್ರವಾಸಿಗರನ್ನ ತುಂಬಿರುವುದೆ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




