suddibindu.in
ಕುಮಟಾ : ಮನೆ ಮೇಲೆ ಮರ ಬಿದ್ದು ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿದ ಘಟನೆ ಇಂದು ಬೆಳಿಗ್ಗೆ ಪಟ್ಟಣದ ದೇವರಹಕ್ಕಲದಲ್ಲಿ ಸಂಭವಿಸಿದೆ.
- ಕುಮಟಾ ತಾಲೂಕಾ ಪಂಚಾಯತ್ ಕಾಮಗಾರಿ ಟೆಂಡರ್ನಲ್ಲಿ ಅವ್ಯವಹಾರ ಆರೋಪ
- ಡಿಸೆಂಬರ್ 6ಕ್ಕೆ ಉತ್ತರ ಕನ್ನಡಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ
- ಕಾಂಗ್ರೇಸ್ ವಿರುದ್ಧ ಕಾರವಾರದಲ್ಲಿ ಬಿಜೆಪಿ ಪ್ರತಿಭಟನೆ
ಕಳೆದ ಎರಡು ದಿನದಿಂದ ರಾತ್ರಿ ಮಳೆಯಾಗುತ್ತಿದ್ದು, ದೇವರಹಕ್ಕಲ್ ಹೋಗುವ ರಸ್ತೆಯಲ್ಲಿದ್ದ ಅಟ್ಲಿ ಮರ ಲಲಿತಾ ನಾಯ್ಕರ ಮನೆ ಮೇಲೆ ಬಿದ್ದಿದೆ. ಮರ ಬಿದ್ದ ಪರಿಣಾಮ ಮನೆಯ ಮುಂಭಾಗದ ಕಟ್ಟಡ ಸಹಿತ ಮನೆ ಮುಂದೆ ನಿಲ್ಲಿಸಿದ್ದ ಎಕ್ಟಿವಾ ಸ್ಕೂಟರಿಗೂ ಹಾನಿಯಾಗಿದ್ದು, ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿದೆ. ಲಲಿತಾ ನಾಯ್ಕರು ಬಡ ಕುಟುಂಬದವರಾಗಿದ್ದು, ಪುರಸಭೆ ಅಥವಾ ಸಂಬಂಧಪಟ್ಟ ಇಲಾಖೆಯವರು ಸೂಕ್ತ ಪರಿಹಾರ ನೀಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಸ್ಥಳೀಯ ಪುರಸಭಾ ಸದಸ್ಯ ಎಂ. ಟಿ. ನಾಯ್ಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿದ್ದಾರೆ.







