suddibindu.in
ಕುಮಟಾ : ಮನೆ ಮೇಲೆ ಮರ ಬಿದ್ದು ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿದ ಘಟನೆ ಇಂದು ಬೆಳಿಗ್ಗೆ ಪಟ್ಟಣದ ದೇವರಹಕ್ಕಲದಲ್ಲಿ ಸಂಭವಿಸಿದೆ.
- ಅಕ್ಷರ ಕಲಿಸಿ ಬದುಕು ರೂಪಿಸಿದ ಸುಜಾತಾ ಟೀಚರ್ಗೆ; ನಾಳೆ ಭಾವನಾತ್ಮಕ ಬೀಳ್ಕೊಡುಗೆ
- ರಾಜ್ಯದಲ್ಲಿ ಹವಾಮಾನ ಬದಲಾವಣೆ; ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
- ಜನಮನ ರಂಜಿಸಿದ ಬಿಎಲ್ ಈವೆಂಟ್ಸ್ ಮತ್ತು ಪ್ರೊಡಕ್ಷನ್ ರಸಮಂಜರಿ : ಕರಾವಳಿ–ಮಲೆನಾಡು ತಂಡದಿಂದ ಸಂಗೀತ ರಸದೌತಣ
ಕಳೆದ ಎರಡು ದಿನದಿಂದ ರಾತ್ರಿ ಮಳೆಯಾಗುತ್ತಿದ್ದು, ದೇವರಹಕ್ಕಲ್ ಹೋಗುವ ರಸ್ತೆಯಲ್ಲಿದ್ದ ಅಟ್ಲಿ ಮರ ಲಲಿತಾ ನಾಯ್ಕರ ಮನೆ ಮೇಲೆ ಬಿದ್ದಿದೆ. ಮರ ಬಿದ್ದ ಪರಿಣಾಮ ಮನೆಯ ಮುಂಭಾಗದ ಕಟ್ಟಡ ಸಹಿತ ಮನೆ ಮುಂದೆ ನಿಲ್ಲಿಸಿದ್ದ ಎಕ್ಟಿವಾ ಸ್ಕೂಟರಿಗೂ ಹಾನಿಯಾಗಿದ್ದು, ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿದೆ. ಲಲಿತಾ ನಾಯ್ಕರು ಬಡ ಕುಟುಂಬದವರಾಗಿದ್ದು, ಪುರಸಭೆ ಅಥವಾ ಸಂಬಂಧಪಟ್ಟ ಇಲಾಖೆಯವರು ಸೂಕ್ತ ಪರಿಹಾರ ನೀಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಸ್ಥಳೀಯ ಪುರಸಭಾ ಸದಸ್ಯ ಎಂ. ಟಿ. ನಾಯ್ಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿದ್ದಾರೆ.




