suddibindu.in
ಕುಮಟಾ : ಮನೆ ಮೇಲೆ ಮರ ಬಿದ್ದು ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿದ ಘಟನೆ ಇಂದು ಬೆಳಿಗ್ಗೆ ಪಟ್ಟಣದ ದೇವರಹಕ್ಕಲದಲ್ಲಿ ಸಂಭವಿಸಿದೆ.
- ಉತ್ತರ ಕನ್ನಡದಲ್ಲಿ ಡಿಜಿಟಲ್ ಕ್ರಾಂತಿಗೆ ಮುನ್ನುಡಿ
- B.C. Nagesh : ಮಾಜಿ ಶಿಕ್ಷಣ ಸಚಿವ ಬಿ,ಸಿ, ನಾಗೇಶ ನಿಧನ
- ಮಂಕಾಳ್ ವೈದ್ಯ ಸಜ್ಜನ ವ್ಯಕ್ತಿ: ಸಿಎಂ ಡಿ ಕೆ ಶಿವಕುಮಾರ್ ಬಣ್ಣನೆ
ಕಳೆದ ಎರಡು ದಿನದಿಂದ ರಾತ್ರಿ ಮಳೆಯಾಗುತ್ತಿದ್ದು, ದೇವರಹಕ್ಕಲ್ ಹೋಗುವ ರಸ್ತೆಯಲ್ಲಿದ್ದ ಅಟ್ಲಿ ಮರ ಲಲಿತಾ ನಾಯ್ಕರ ಮನೆ ಮೇಲೆ ಬಿದ್ದಿದೆ. ಮರ ಬಿದ್ದ ಪರಿಣಾಮ ಮನೆಯ ಮುಂಭಾಗದ ಕಟ್ಟಡ ಸಹಿತ ಮನೆ ಮುಂದೆ ನಿಲ್ಲಿಸಿದ್ದ ಎಕ್ಟಿವಾ ಸ್ಕೂಟರಿಗೂ ಹಾನಿಯಾಗಿದ್ದು, ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿದೆ. ಲಲಿತಾ ನಾಯ್ಕರು ಬಡ ಕುಟುಂಬದವರಾಗಿದ್ದು, ಪುರಸಭೆ ಅಥವಾ ಸಂಬಂಧಪಟ್ಟ ಇಲಾಖೆಯವರು ಸೂಕ್ತ ಪರಿಹಾರ ನೀಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಸ್ಥಳೀಯ ಪುರಸಭಾ ಸದಸ್ಯ ಎಂ. ಟಿ. ನಾಯ್ಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿದ್ದಾರೆ.




