suddibindu.in
ಕುಮಟಾ : ಮನೆ ಮೇಲೆ ಮರ ಬಿದ್ದು ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿದ ಘಟನೆ ಇಂದು ಬೆಳಿಗ್ಗೆ ಪಟ್ಟಣದ ದೇವರಹಕ್ಕಲದಲ್ಲಿ ಸಂಭವಿಸಿದೆ.
- ಸಿದ್ದಾಪುರದಲ್ಲಿ ಕಾಂಗ್ರೆಸ್ ಮುಖಂಡನಿಗೆ ಸೇರಿದದ್ದು ಎನ್ನಲಾದ ಜೂಜಾಟ ಅಡ್ಡೆ ಮೇಲೆ ದಾಳಿ: 57 ಮಂದಿ ವಶ, ₹3.30 ಲಕ್ಷ ನಗದು ಜಪ್ತಿ
- ಚಿಪ್ಪೆಕಲ್ಲು ದುರಂತ: ಸಂತ್ರಸ್ತರ ಸ್ಮರಣಾರ್ಥ 11 ಗಿಡ ನೆಟ್ಟ ಮಂಕಾಳ ವೈದ್ಯ
- Ramalinga-reddy-resigns/ಡಿಕೆ ಶಿವಕುಮಾರ ಸಚಿವ ಸಂಪುಟದಲ್ಲಿ ಮೊದಲ ವಿಕೆಟ್ ಪತನ: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ
ಕಳೆದ ಎರಡು ದಿನದಿಂದ ರಾತ್ರಿ ಮಳೆಯಾಗುತ್ತಿದ್ದು, ದೇವರಹಕ್ಕಲ್ ಹೋಗುವ ರಸ್ತೆಯಲ್ಲಿದ್ದ ಅಟ್ಲಿ ಮರ ಲಲಿತಾ ನಾಯ್ಕರ ಮನೆ ಮೇಲೆ ಬಿದ್ದಿದೆ. ಮರ ಬಿದ್ದ ಪರಿಣಾಮ ಮನೆಯ ಮುಂಭಾಗದ ಕಟ್ಟಡ ಸಹಿತ ಮನೆ ಮುಂದೆ ನಿಲ್ಲಿಸಿದ್ದ ಎಕ್ಟಿವಾ ಸ್ಕೂಟರಿಗೂ ಹಾನಿಯಾಗಿದ್ದು, ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿದೆ. ಲಲಿತಾ ನಾಯ್ಕರು ಬಡ ಕುಟುಂಬದವರಾಗಿದ್ದು, ಪುರಸಭೆ ಅಥವಾ ಸಂಬಂಧಪಟ್ಟ ಇಲಾಖೆಯವರು ಸೂಕ್ತ ಪರಿಹಾರ ನೀಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಸ್ಥಳೀಯ ಪುರಸಭಾ ಸದಸ್ಯ ಎಂ. ಟಿ. ನಾಯ್ಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿದ್ದಾರೆ.




