suddibindu.in
ಕಾರವಾರ: ತಾಲೂಕಿನ ಅಮದಳ್ಳಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರಕ್ಕೆ ಹೊಂದಿಕೊಂಡಿರುವ ಗಣಪತಿ ದೇವಸ್ಥಾನದಲ್ಲಿ ಭಾರೀ ಪ್ರಮಾಣದಲ್ಲಿ ಕಳ್ಳತನವಾಗಿದ್ದು, ದೇವರ ಬೆಳ್ಳಿ ಮುಖವಾಡವನ್ನೆ ಕಳ್ಳತನ ಮಾಡಲಾಗಿದೆ.
ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಕಳ್ಳರು ಗಣಪತಿ ದೇವರಿಗೆ ಹಾಕಲಾಗಿದ್ದ ಬೆಳ್ಳಿಯ ಮುಖವಾಡವನ್ನೆ ಕದ್ದು ಪರಾರಿಯಾಗಿದ್ದಾರೆ. ಕಳ್ಳತನವಾಗಿರುವ ಗಣಪತಿ ದೇವರ ಮುಖವಾಡ ಸುಮಾರು 6ಕೆಜಿ ಬೆಳ್ಳಿಯ ಮುಖವಾಡವಾಗಿದೆ ಎನ್ನಲಾಗಿದೆ.ಅಂದಾಜು 6ರಿಂದ 7ಲಕ್ಷ ಬೆಲೆಬಾಳುವ ಬೆಳ್ಳಿಯ ಮುಖವಾಡ ಎನ್ನಲಾಗಿದೆ.
ಇದನ್ನೂ ಓದಿ
- Bhatkal/ಭಟ್ಕಳ ರಾಶಿ ರಾಶಿ ಮೂಳೆ ಪತ್ತೆ ಪ್ರಕರಣ : ಸುದ್ದಿ ಪ್ರಸಾರವಾಗುತಿದ್ದಂತೆ ಎಚ್ಚೆತ್ತ ಅಧಿಕಾರಿಗಳು
- ದಿನಕರರು ದೇಶ ವಿದೇಶಗಳಲ್ಲಿ ಕನ್ನಡವನ್ನು ಪಸರಿಸಿದ ಕನ್ನಡದ ಕಟ್ಟಾಳು : ರಮೇಶ್ ಗೌಡ ಕಡಮೆ
- ಶಾಸಕ ಸತೀಶ್ ಸೈಲ್ ಗೆ ಮಧ್ಯಂತರ ಜಾಮೀನು
ಈಗಾಗಲೇ ಸುದ್ದಿ ತಿಳಿದ ಅಂಕೋಲಾ ಪೊಲಿಸರು ಹಾಗೂ ಕಾರವಾರದಿಂದ ಬೆರಳಚ್ಚು ತಜ್ಞನರು ಕೂಡ ಘಟನಾ ಸ್ಥಳಕ್ಕೆ ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.ಈ ಬಗ್ಗೆ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.