suddibindu.in
ಕಾರವಾರ: ತಾಲೂಕಿನ ಅಮದಳ್ಳಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರಕ್ಕೆ ಹೊಂದಿಕೊಂಡಿರುವ ಗಣಪತಿ ದೇವಸ್ಥಾನದಲ್ಲಿ ಭಾರೀ ಪ್ರಮಾಣದಲ್ಲಿ ಕಳ್ಳತನವಾಗಿದ್ದು, ದೇವರ ಬೆಳ್ಳಿ ಮುಖವಾಡವನ್ನೆ ಕಳ್ಳತನ ಮಾಡಲಾಗಿದೆ.
ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಕಳ್ಳರು ಗಣಪತಿ ದೇವರಿಗೆ ಹಾಕಲಾಗಿದ್ದ ಬೆಳ್ಳಿಯ ಮುಖವಾಡವನ್ನೆ ಕದ್ದು ಪರಾರಿಯಾಗಿದ್ದಾರೆ. ಕಳ್ಳತನವಾಗಿರುವ ಗಣಪತಿ ದೇವರ ಮುಖವಾಡ ಸುಮಾರು 6ಕೆಜಿ ಬೆಳ್ಳಿಯ ಮುಖವಾಡವಾಗಿದೆ ಎನ್ನಲಾಗಿದೆ.ಅಂದಾಜು 6ರಿಂದ 7ಲಕ್ಷ ಬೆಲೆಬಾಳುವ ಬೆಳ್ಳಿಯ ಮುಖವಾಡ ಎನ್ನಲಾಗಿದೆ.
ಇದನ್ನೂ ಓದಿ
- ಗೃಹಲಕ್ಷ್ಮಿ ಫಲಾನುಭವಿಗಳಿಗೆ ಮರು ಅರ್ಜಿ ಕಡ್ಡಾಯ : ರಾಜ್ಯ ಸರ್ಕಾರದಿಂದ ಮರುಪರಿಶೀಲನೆಗೆ ಸಿದ್ಧತೆ
- “ಕಾಲೇಜು ಶುಲ್ಕ ಕಟ್ಟಲು ಉಳಿಸಿದ್ದ ₹10 ಸಾವಿರ ವಾಪಸ್ ಸಿಗಲಿಲ್ಲ; ಮನನೊಂದು 19ರ ವಿದ್ಯಾರ್ಥಿನಿ ಆತ್ಮಹತ್ಯೆ
- ಕುಮಟಾದಲ್ಲಿ ಭೀಕರ ದುರಂತ: ಬಸ್ನ ತೆರೆದ ಡಿಕ್ಕಿ ಬಾಗಿಲು ಬಡಿದು ಕೆಎಸ್ಆರ್ಟಿಸಿ ಚಾಲಕ ಸಾವು
ಈಗಾಗಲೇ ಸುದ್ದಿ ತಿಳಿದ ಅಂಕೋಲಾ ಪೊಲಿಸರು ಹಾಗೂ ಕಾರವಾರದಿಂದ ಬೆರಳಚ್ಚು ತಜ್ಞನರು ಕೂಡ ಘಟನಾ ಸ್ಥಳಕ್ಕೆ ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.ಈ ಬಗ್ಗೆ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




