suddibindu.in
Karwar:ಕಾರವಾರ : ಕಾರು, ಸ್ಕೋಟಿ, ಹಾಗೂ ಕಾರಿನ ನಡುವೆ ಅಪಘಾತ ಉಂಟಾಗಿ ಸ್ಕೋಟಿ ಸವಾರರನಿಗೆ ಗಂಭೀರ ಗಾಯಗೊಂಡ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಸದಾಶಿವಗಡ ಮಾರುತಿ ಸುಜುಕಿ ಶೋ ರೂಮ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.
ಕಾರವಾರದಿಂದ ಮಾಜಾಳಿ ಕಡೆಗೆ ಹೋಗುವ ಗೋವಾ ನೊಂದಣಿಯ ಕಾರು GAO2. ನ.1366 ರಾಷ್ಟ್ರೀಯ ಹೆದ್ದಾರಿಯಿಂದ ಒಳ ರಸ್ತೆಗೆ ಹೋಗುವಾಗ ಎದುರು ಗಡೆಯಿಂದ ಬರುವ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ನಿಯಂತ್ರಣ ತಪ್ಪಿ ಗೋವಾ ಕಡೆಯಿಂದ ಅಂಕೋಲಾ ಕಡೆಗೆ ಹೋಗುವ ಬೆಳಿ ಬಣ್ಣದ KA 30 N.0915 ಕಾರಿಗೆ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ
- ಗೋಪಾಲಕೃಷ್ಣ ನಾಯಕ ಕೊಲೆ ಯತ್ನ ಕೇಸ್: ಸೂಪಾರಿ ಕೊಟ್ಟವನು ಇವನೇನಾ? ಸಿಸಿ ಕ್ಯಾಮೆರಾದಲ್ಲಿ ಆರೋಪಿಗಳ ಚಲನವಲನ ಸೆರೆ
- ಗೋಪಾಲಕೃಷ್ಣ ನಾಯಕ ಕೊಲೆ ಯತ್ನ; ಆರೋಪಿಗಳು ಪೊಲೀಸ್ ವಶಕ್ಕೆ
- ಕಾಂಗ್ರೇಸ ಮುಖಂಡ ಗೋಪಾಲಕೃಷ್ಣ ನಾಯಕ ಕೊಲೆಗೆ ಯತ್ನ
ಈ ಅಪಘಾತದಲ್ಲಿ ಕಾರು ಹಾಗೂ ಸ್ಕೂಟಿ ಜಕ್ಕಂಗೊಂಡಿದ್ದು ಸ್ಕೋಟಿ ಸವಾರನಿಗೆ ಗಂಭೀರ ಗಾಯವಾಗಿದೆ. ಗಾಯವಾದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲೆಸಲಾಗಿದೆ.ಘಟನಾ ಸ್ಥಳಕ್ಕೆ ಪೊಲೀಸರು ಬಂದು ಸ್ಥಳ ಪರಿಶೀಲನೆ ನಡೆಸಿದ್ದು, ಕಾರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






