suddibindu.in
ಕುಮಟಾ : ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಎದುರಿಗೆ ಬಂದ ಆಕಳ ಕರು ತಪ್ಪಿಸಲು ಹೋಗಿ ಬೈಕ್ ಪಲ್ಟಿಯಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ದೀವಳ್ಳಿಯಲ್ಲಿ ನಡೆದಿದೆ.
ಕೆಕ್ಕಾರದ ರತ್ನಾಕರ ರಾಮ ಗೌಡ (27) ಗಂಭೀರವಾಗಿ ಗಾಯಗೊಂಡ ಯುವಕನಾಗಿದ್ದಾನೆ. ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಎದುರಿನಿಂದ ಆಕಳು ಕರು ಒಂದು ಅಡ್ಡ ಬಂದಿದೆ. ಈ ವೇಳೆ ಬೈಕ್ ಸವಾರ ಆಕಳು ಕರುವನ್ನ ತಪ್ಪಿಸಲು ಪ್ರಯತ್ನಿಸಿದ್ದಾನೆ.
ಇದನ್ನೂ ಓದಿ
- gold rate/ ಚಿನ್ನ, ಬೆಳ್ಳಿ ದರ ದಸರಾ ವೇಳೆ ಇಳಿಕೆ ಸಾಧ್ಯತೆ
- ಏರ್ ಇಂಡಿಯಾ ವಿಮಾನ ದುರಂತ : ಗೋಕರ್ಣದಲ್ಲಿ ಪಿಂಡಪ್ರದಾನ
- Accident /ಘನಘೋರ ಅಪಘಾತ: ಲಾರಿ ಹರಿದು 8ಮಂದಿ ಸಾವು : 20ಕ್ಕೂ ಹೆಚ್ಚು ಜನ ಗಂಭೀರ
ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರನಿಗೆ ತಕ್ಷಣ ಕುಮಟಾ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.