suddibindu.in
ಬೆಂಗಳೂರು : ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಎಸ್ಐಟಿ ತನಿಖೆ ಎದುರಿಸುತ್ತಿದ್ದರೆ. ಇತ್ತ ಪ್ರಜ್ವಲ್ ತಾಯಿ ಭವಾನಿ ರೇವಣ್ಣ ಅವರಿಗೆ ಕ್ಯಾನ್ಸರ್ ಕಾಯಿಲೆ ಇದೆ ಎನ್ನುವ ಮಾಹಿತಿ ಅವರ ಪರ ವಕೀಲರಾಗಿರುವ ಸಂದೇಶ ಔಟಾ ಅವರು ನ್ಯಾಯಾಲಯದ ಎದುರು ಭವಾನಿ ರೇವಣ್ಣ ಅವರಿಗೆ ಕ್ಯಾನ್ಸರ್ ಇದೆ ಎನ್ನುವ ಬಗ್ಗೆ ವಾದ ಮಂಡಿಸಿದ್ದಾರೆ
ಸದ್ಯ ಭವಾನಿ ರೇವಣ್ಣ ಅವರಿಗೆ ಕ್ಯಾನ್ಸರ್ ಖಾಯಿಲೆ ಇದೆ ಹೀಗಾಗಿ ಅವರಿಗೆ ಚಿಕಿತ್ಸೆ ನೀಡಬೇಕಾಗಿದೆ. ಒಂದುವೇಳೆ ಅವರಿಗೆ ಬಂಧನವಾದರೆ ಅವರ ಚಿಕಿತ್ಸೆಗೆ ಸಮಸ್ಯೆ ಉಂಟಾಗಲಿದೆ ಹೀಗಾಗಿ ಅವರಿಗೆ ಚಿಕಿತ್ಸೆ ನೀಡಬೇಕಾಗಿರುವುದು ತೀರಾ ಅವಶ್ಯಕವಾಗಿದೆ. ಹೀಗಾಗಿ ಅವರಿಗೆ ಮಹಿಳೆ ಅಪಹರಣ ಪ್ರಕರಣದಲ್ಲಿ ಜಾಮೀನು ನೀಡಬೇಕು ಎಂದು ಭವಾನಿ ರೇವಣ್ಣ ಪರ ವಕೀಲರಾಗಿರುವ ಸಂದೇಶ ಔಟಾ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದಾರೆ.
ಇದನ್ನೂ ಓದಿ
- ಬಿಜೆಪಿ ತಾಲೂಕು ಅಧ್ಯಕ್ಷರ ವಿರುದ್ಧ ಭೂ ಒತ್ತುವರಿ ಆರೋಪ : ಕ್ರಮಕ್ಕೆ ಆಗ್ರಹಿಸಿ ತಹಶಿಲ್ದಾರರಿಗೆ ಮನವಿ
- ನಕಲಿ ಪೊಲೀಸರ ಕಳ್ಳಾಟ: ಯಲ್ಲಾಪುರದಲ್ಲಿ ಭಾರಿ ಸೈಬರ್ ವಂಚನೆ
- ಭಾರೀ ಮಳೆಗೆ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವು
ಕ್ಯಾನ್ಸರ್ ದೀಘಕಾಲವಾದ ಕಾಯಿಲೆಯಾಗಿದೆ. ಅವರಿಗೆ ಚಿಕಿತ್ಸೆ ನೀಡಬೇಕಾಗಿರುವುದು ತೀರಾ ಅವಶ್ಯಕವಾಗಿದೆ. ಒಂದು ವೇಳೆ ಅವರಗೆ ಕ್ಯಾನ್ಸರ್ ಸಂಬಂಧಿಸಿ ಸರಿಯಾದ ಚಿಕಿತ್ಸೆ ದೊರೆಯದೆ ಹೋದರೆ ಜೀವಕ್ಕೆ ಅಪಾಯ ಎದುರಾಗುವ ಸಾಧ್ಯತೆ ಇದೆ. ಹೀಗಾಗಿ ಜಾಮೀನು ನೀಡಬೇಕು ಎಂದು ಭವಾನಿ ಪರ ವಕೀಲರು ನ್ಗಾಯಾಲಯದ ಎದುರು ಈ ವಿಚಾರ ಪ್ರಸ್ತಾಪಿಸಿದ್ದಾರೆ.






