suddibindu.in
ಶಿರಸಿ : ಪ್ರೀತಮ ಪಾಲನಕರ ಆತ್ಮಹತ್ಯೆ ಪ್ರಕರಣ ಹಾಗೂ ಕೆಡಿಸಿಸಿ ಬ್ಯಾಂಕ್ ನಕಲಿ ಕಾಗದ ಪತ್ರ ನೀಡಿ ಕಾರು ಖರೀದಿ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಬ್ಲಾಕ್ ಮೇಲರ್ ರವೀಶ ಹೆಗಡೆ ಎಂಬಾತನನ್ನ ನೇಪಾಳದ ಕಡ್ಮಂಡುವಿನಲ್ಲಿ ಶಿರಸಿ ಪೊಲೀಸರು ಬಂಧಿಸಿ ಕರೆತಂದಿದ್ದಾರೆ.
ಈತ ಹಣ ಮಾಡುವ ಉದ್ದೇಶದಿಂದ ಅನೇಕರಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ಎನ್ನುವ ಆರೋಪ ಈ ಹಿಂದಿನಿಂದಲ್ಲೂ ಕೇಳಿ ಬಂದಿತ್ತು. ಅಕ್ಷಯ ಗಾರ್ಡನ ಮಾಲಕನಿಗೆ ಬ್ಲಾಕ್ ಮೇಲ್ ಮಾಡಿದ ಹಣ ವಸೂಲಿ ದಂಧೆ ಇಳಿದಿದ್ದ ಎನ್ನುವ ಆರೋಪ ಇದೆ. ಈತ ಕಿರುಕುಳಕ್ಕೆ ಪ್ರೀತಮ ಪಾಲನಕರ್ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ದೂರುಗಳು ದಾಖಲಾಗಿದ್ದವು.ಆತನ ಬಂಧಿಸುವಂತೆ ನಗರದ ಹಲವು ಸಂಘಟನೆಗಳು ಒತ್ತಾಯ ಪಡಿಸಲಾಗಿತ್ತು.
ಇದನ್ನೂ ಓದಿ
- ರಾಜ್ಯದಲ್ಲಿ ಹವಾಮಾನ ಬದಲಾವಣೆ; ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
- ಜನಮನ ರಂಜಿಸಿದ ಬಿಎಲ್ ಈವೆಂಟ್ಸ್ ಮತ್ತು ಪ್ರೊಡಕ್ಷನ್ ರಸಮಂಜರಿ : ಕರಾವಳಿ–ಮಲೆನಾಡು ತಂಡದಿಂದ ಸಂಗೀತ ರಸದೌತಣ
- ಕರಾವಳಿ–ಮಲೆನಾಡಿಗೆ ಹೊಸ ರೂಪ: ಸಿಎಂ ಡಿ.ಕೆ.ಶಿವಕುಮಾರ್
ಕಳೆದ ಕೆಲ ದಿನಗಳಿಂದ ಆರೋಪಿ ಬಂಧನಕ್ಕಾಗಿ ಶಿರಸಿ ಪೊಲೀಸರು ಹುಡುಕಾಟ ನಡೆಸಿದ್ದು, ಸಿ.ಪಿ.ಐ. ಶಶಿಕಾಂತ ವರ್ಮಾ ನೇತೃತ್ವದಲ್ಲಿ ಪಿ.ಎಸ್.ಐ. ನಾಗಪ್ಪ ಹಾಗೂ ಸಿಬ್ಬಂದಿಗಳಿಂದ ಕಾರ್ಯಾಚರಣೆ ನಡೆಸುವ ಮೂಲಕ ಆರೋಪಿಯನ್ನ ಹಿಡಿದು ತಂದಿದ್ದಾರೆ.




