suddibindu.in
ಶಿರಸಿ : ಪ್ರೀತಮ ಪಾಲನಕರ ಆತ್ಮಹತ್ಯೆ ಪ್ರಕರಣ ಹಾಗೂ ಕೆಡಿಸಿಸಿ ಬ್ಯಾಂಕ್ ನಕಲಿ ಕಾಗದ ಪತ್ರ ನೀಡಿ ಕಾರು ಖರೀದಿ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಬ್ಲಾಕ್ ಮೇಲರ್ ರವೀಶ ಹೆಗಡೆ ಎಂಬಾತನನ್ನ ನೇಪಾಳದ ಕಡ್ಮಂಡುವಿನಲ್ಲಿ ಶಿರಸಿ ಪೊಲೀಸರು ಬಂಧಿಸಿ ಕರೆತಂದಿದ್ದಾರೆ.
ಈತ ಹಣ ಮಾಡುವ ಉದ್ದೇಶದಿಂದ ಅನೇಕರಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ಎನ್ನುವ ಆರೋಪ ಈ ಹಿಂದಿನಿಂದಲ್ಲೂ ಕೇಳಿ ಬಂದಿತ್ತು. ಅಕ್ಷಯ ಗಾರ್ಡನ ಮಾಲಕನಿಗೆ ಬ್ಲಾಕ್ ಮೇಲ್ ಮಾಡಿದ ಹಣ ವಸೂಲಿ ದಂಧೆ ಇಳಿದಿದ್ದ ಎನ್ನುವ ಆರೋಪ ಇದೆ. ಈತ ಕಿರುಕುಳಕ್ಕೆ ಪ್ರೀತಮ ಪಾಲನಕರ್ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ದೂರುಗಳು ದಾಖಲಾಗಿದ್ದವು.ಆತನ ಬಂಧಿಸುವಂತೆ ನಗರದ ಹಲವು ಸಂಘಟನೆಗಳು ಒತ್ತಾಯ ಪಡಿಸಲಾಗಿತ್ತು.
ಇದನ್ನೂ ಓದಿ
- 200 ರೂಪಾಯಿ ವಂಚನೆ ಪ್ರಕರಣ – 30 ವರ್ಷಗಳ ಬಳಿಕ ಆರೋಪಿ ಬಂಧನ
- ಕಾರವಾರ-ಬೆಂಗಳೂರು ಬಸ್ ಸಮಸ್ಯೆ: ಸಾರಿಗೆ ಸಚಿವರ ಅಂಗಳಕ್ಕೆ: ಸಮಸ್ಯೆ ಪರಿಹರಿಸುವಂತೆ ಪತ್ರಕರ್ತ ಶ್ರೀನಾಥ್ ಜೋಶಿ ಆಗ್ರಹ
- ಬೆಂಗಳೂರು ನಿವಾಸಿ ಶಿರಸಿ–ಸಿದ್ದಾಪುರ ಜನರಿಗಾಗಿ ಸದಾ ನಾನು ಇರುತ್ತೇನೆ: ಶಾಸಕ ಭೀಮಣ್ಣ ಟಿ. ನಾಯ್ಕ ಭರವಸೆ
ಕಳೆದ ಕೆಲ ದಿನಗಳಿಂದ ಆರೋಪಿ ಬಂಧನಕ್ಕಾಗಿ ಶಿರಸಿ ಪೊಲೀಸರು ಹುಡುಕಾಟ ನಡೆಸಿದ್ದು, ಸಿ.ಪಿ.ಐ. ಶಶಿಕಾಂತ ವರ್ಮಾ ನೇತೃತ್ವದಲ್ಲಿ ಪಿ.ಎಸ್.ಐ. ನಾಗಪ್ಪ ಹಾಗೂ ಸಿಬ್ಬಂದಿಗಳಿಂದ ಕಾರ್ಯಾಚರಣೆ ನಡೆಸುವ ಮೂಲಕ ಆರೋಪಿಯನ್ನ ಹಿಡಿದು ತಂದಿದ್ದಾರೆ.