suddibindu.in
ಶಿರಸಿ : ಪ್ರೀತಮ ಪಾಲನಕರ ಆತ್ಮಹತ್ಯೆ ಪ್ರಕರಣ ಹಾಗೂ ಕೆಡಿಸಿಸಿ ಬ್ಯಾಂಕ್ ನಕಲಿ ಕಾಗದ ಪತ್ರ ನೀಡಿ ಕಾರು ಖರೀದಿ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಬ್ಲಾಕ್ ಮೇಲರ್ ರವೀಶ ಹೆಗಡೆ ಎಂಬಾತನನ್ನ ನೇಪಾಳದ ಕಡ್ಮಂಡುವಿನಲ್ಲಿ ಶಿರಸಿ ಪೊಲೀಸರು ಬಂಧಿಸಿ ಕರೆತಂದಿದ್ದಾರೆ.
ಈತ ಹಣ ಮಾಡುವ ಉದ್ದೇಶದಿಂದ ಅನೇಕರಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ಎನ್ನುವ ಆರೋಪ ಈ ಹಿಂದಿನಿಂದಲ್ಲೂ ಕೇಳಿ ಬಂದಿತ್ತು. ಅಕ್ಷಯ ಗಾರ್ಡನ ಮಾಲಕನಿಗೆ ಬ್ಲಾಕ್ ಮೇಲ್ ಮಾಡಿದ ಹಣ ವಸೂಲಿ ದಂಧೆ ಇಳಿದಿದ್ದ ಎನ್ನುವ ಆರೋಪ ಇದೆ. ಈತ ಕಿರುಕುಳಕ್ಕೆ ಪ್ರೀತಮ ಪಾಲನಕರ್ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ದೂರುಗಳು ದಾಖಲಾಗಿದ್ದವು.ಆತನ ಬಂಧಿಸುವಂತೆ ನಗರದ ಹಲವು ಸಂಘಟನೆಗಳು ಒತ್ತಾಯ ಪಡಿಸಲಾಗಿತ್ತು.
ಇದನ್ನೂ ಓದಿ
- ತೆಂಗಿನ ಮರದೊಳಗೆ ಅವಿತುಕೊಂಡಿದ್ದ ಬೃಹತ್ ನಾಗರ ಹಾವು ರಕ್ಷಣೆ
- ಹೆದ್ದಾರಿ ಪಕ್ಕದಲ್ಲಿ ಸಾಲು ಸಾಲು ವಾಹನ ನಿಲುಗಡೆ ಹಾವಳಿ: ಅಪಘಾತ ಭೀತಿ
- “ಗ್ಯಾಸ್ ಸಿಲಿಂಡರ್ಗೆ ಗುಡ್ಬೈ.? “ಗ್ಯಾಸ್ ಇಲ್ಲ, ಎಣ್ಣೆ ಇಲ್ಲ! ಕೇವಲ ನೀರಿನಿಂದ ಅಡುಗೆ.
ಕಳೆದ ಕೆಲ ದಿನಗಳಿಂದ ಆರೋಪಿ ಬಂಧನಕ್ಕಾಗಿ ಶಿರಸಿ ಪೊಲೀಸರು ಹುಡುಕಾಟ ನಡೆಸಿದ್ದು, ಸಿ.ಪಿ.ಐ. ಶಶಿಕಾಂತ ವರ್ಮಾ ನೇತೃತ್ವದಲ್ಲಿ ಪಿ.ಎಸ್.ಐ. ನಾಗಪ್ಪ ಹಾಗೂ ಸಿಬ್ಬಂದಿಗಳಿಂದ ಕಾರ್ಯಾಚರಣೆ ನಡೆಸುವ ಮೂಲಕ ಆರೋಪಿಯನ್ನ ಹಿಡಿದು ತಂದಿದ್ದಾರೆ.






