suddibindu.in
Karwar: ಕಾರವಾರ : ಉತ್ತರಕನ್ನಡ ಜಿಲ್ಲೆಯ( Uttar Kannada district) ಕರಾವಳಿ ತಾಲೂಕು ಸೇರಿದಂತೆ ಜಿಲ್ಲಾದ್ಯಂತ ಕಳೆದ ಮೂರು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಹವಮಾನ ಇಲಾಖೆ ನಾಳೆ ಜಿಲ್ಲಾದ್ಯಂತ ರೆಡ್ ಅಲರ್ಟ್(Red alert) ಘೋಷಣೆ ಮಾಡಿದೆ.
ಜಿಲ್ಲೆಯ ಕಾರವಾದಿಂದ ಹಿಡಿದು ಕರಾವಳಿ ತಾಲೂಕು ಸೇರಿ ಮಲೆನಾಡು ಹಾಗೂ ಬಯಲು ಸೀಮೆ ತಾಲೂಕಿನಲ್ಲಿ ಕಳೆದ ಮೂರು ದಿನಗಳಿಂದಲೂ ಮಳೆ ಆರ್ಭಟ ಜೋರಾಗಿದೆ. ಎರಡು ದಿನಗಳ ಕಾಲ ಸುರಿದ ಮಳೆಯಿಂದ ಜಿಲ್ಲೆಯ ಅನೇಕ ಕಡೆಯಲ್ಲಿ ಮಳೆ ಈಗಾಗಲೇ ಸಾಕಷ್ಟು ಅವಾಂತರ ಸೃಷ್ಟಿ ಮಾಡಿದೆ. ಇನ್ನೂ ಸಹ ಮೂರು ದಿನಗಳ ಕಾಲ ಜಿಲ್ಲಾದ್ಯಂತ ವ್ಯಾಪಕ ಮಳೆ ಉಂಟಾಗಲಿದ್ದು, ತಗ್ಗು ಪ್ರದೇಶದ ಜನ ಎಚ್ಚರಿಕೆಯಿಂದ ಇರುವಂತೆ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ
- Breaking/BEO ಭೇಟಿ ಬಳಿಕ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

- ಪೊಲೀಸ್ ಸ್ಟೇಷನ್ಲ್ಲಿ ಡೀಲ್, ಮೈದಾನದಲ್ಲಿ ಟ್ರ್ಯಾಪ್ : ಅಗ್ರಹಾರ ಠಾಣಾ ಇನ್ಸ್ಪೆಕ್ಟರ್ ಬಂಧನ

- ರಿಶೇಲ್ ಡಿಸೋಜಾ ಆತ್ಮಹತ್ಯೆ ಪ್ರಕರಣ : ಚೆನೈನಲ್ಲಿ ಚಿರಾಗ್ಗೆ ಬಂಧಿಸಿದ ಪೊಲೀಸರು

ಭಾರೀ ಮಳೆ ಆಗಲಿರುವ ಕಾರಣ ಮೀನುಗಾರರು ಮೀನುಗಾರಿಕೆಗಾಗಿ ನೀರಿಗೆ ಇಳಿಯದಂತೆ ಸೂಚನೆ ನೀಡಲಾಗಿದ್ದು, ಇನ್ನೂ ಜಿಲ್ಲೆಗೆ ಬರುವ ಪ್ರವಾಸಿಗರು ಕಡಲತೀರ ಹಾಗೂ ಜಲಪಾತ ಕಡೆ ಹೋಗದಂತೆ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.




