suddibindu.in
Karwar: ಕಾರವಾರ : ಉತ್ತರಕನ್ನಡ ಜಿಲ್ಲೆಯ( Uttar Kannada district) ಕರಾವಳಿ ತಾಲೂಕು ಸೇರಿದಂತೆ ಜಿಲ್ಲಾದ್ಯಂತ ಕಳೆದ ಮೂರು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಹವಮಾನ ಇಲಾಖೆ ನಾಳೆ ಜಿಲ್ಲಾದ್ಯಂತ ರೆಡ್ ಅಲರ್ಟ್(Red alert) ಘೋಷಣೆ ಮಾಡಿದೆ.
ಜಿಲ್ಲೆಯ ಕಾರವಾದಿಂದ ಹಿಡಿದು ಕರಾವಳಿ ತಾಲೂಕು ಸೇರಿ ಮಲೆನಾಡು ಹಾಗೂ ಬಯಲು ಸೀಮೆ ತಾಲೂಕಿನಲ್ಲಿ ಕಳೆದ ಮೂರು ದಿನಗಳಿಂದಲೂ ಮಳೆ ಆರ್ಭಟ ಜೋರಾಗಿದೆ. ಎರಡು ದಿನಗಳ ಕಾಲ ಸುರಿದ ಮಳೆಯಿಂದ ಜಿಲ್ಲೆಯ ಅನೇಕ ಕಡೆಯಲ್ಲಿ ಮಳೆ ಈಗಾಗಲೇ ಸಾಕಷ್ಟು ಅವಾಂತರ ಸೃಷ್ಟಿ ಮಾಡಿದೆ. ಇನ್ನೂ ಸಹ ಮೂರು ದಿನಗಳ ಕಾಲ ಜಿಲ್ಲಾದ್ಯಂತ ವ್ಯಾಪಕ ಮಳೆ ಉಂಟಾಗಲಿದ್ದು, ತಗ್ಗು ಪ್ರದೇಶದ ಜನ ಎಚ್ಚರಿಕೆಯಿಂದ ಇರುವಂತೆ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ
- ಜೂನ್ 25ಕ್ಕೆ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ
- ಅನಂತಕುಮಾರ ಹೆಗಡೆ ಗನ್ ಮ್ಯಾನ್ ಅಮಾನತ್
- ಎಸಿ ಕಾರು ಬಿಟ್ಟು ಪಿಂಕ್ ಆಟೋದಲ್ಲಿ ಡಿಸಿ ಸಂಚಾರ..!
ಭಾರೀ ಮಳೆ ಆಗಲಿರುವ ಕಾರಣ ಮೀನುಗಾರರು ಮೀನುಗಾರಿಕೆಗಾಗಿ ನೀರಿಗೆ ಇಳಿಯದಂತೆ ಸೂಚನೆ ನೀಡಲಾಗಿದ್ದು, ಇನ್ನೂ ಜಿಲ್ಲೆಗೆ ಬರುವ ಪ್ರವಾಸಿಗರು ಕಡಲತೀರ ಹಾಗೂ ಜಲಪಾತ ಕಡೆ ಹೋಗದಂತೆ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.