suddibindu.in
ದಾಂಡೇಲಿ : ನಗರದ ವನಶ್ರೀ ನಗರದ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಮನೆ ಕಳ್ಳತನ ಮಾಡಿದ ಮೂವರು ಆರೋಪಿಗಳಾದ ನಗರದ ಮಾರುತಿ ನಗರದ ನಿವಾಸಿಗಳಾದ ಅಶೋಕ ಗುರವ ಮತ್ತು ಫೈರೋಜ್ ಅಬ್ದುಲ್ ಸತ್ತಾರ್ ದೌಲತ್ತಿ ಹಾಗೂ ಗಾಂಧಿನಗರದ ನಿವಾಸಿ ಮೈಕಲ್ ಬನ್ನಿ ಅಪ್ಪು ಕಕ್ಕೇರಿ ಇವರನ್ನು ಬಂಧಿಸಿ, ಇವರು ಕಳ್ಳತನ ಮಾಡಿದ ಬಂಗಾರದ ಉಂಗುರ -2, ಬೆಳ್ಳಿಯ ಕಾಲು ಚೈನ್ :6 ಜೊತೆ, ಬೆಳ್ಳಿಯ ಕೈಬಳೆ: 4, ವಾಚ್:3, ಬೆಳ್ಳಿಯ ದೀಪ ಹಚ್ಚುವ ಹಣತೆ : 1, ಸಣ್ಣ ಡಬ್ಬಾ:1 ಮತ್ತು ರೂ: 3,650/- ನಗದು ಹಾಗೂ ಈ ಕೃತ್ಯಕ್ಕೆ ಬಳಸಲಾದ ದ್ವಿಚಕ್ರ ವಾಹನ ಕೆಎ:65, ಕೆ: 2945 ನ್ನು ವಶಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ
- “ರೈತರನ್ನು ಮದುವೆಯಾಗುವ ಮಹಿಳೆಯರಿಗೆ ಪ್ರೋತ್ಸಾಹ ಧನ ನೀಡುವಂತೆ ಸಿಎಂಗೆ ಪತ್ರ ಬರೆದ ಶಾಸಕ
- Bjp/ಬಿಜೆಪಿ ಉತ್ತರಕನ್ನಡ ಜಿಲ್ಲಾ ರೈತಮೋರ್ಚಾ ಅಧ್ಯಕ್ಷರಾಗಿ ಅನಂತಮೂರ್ತಿ ಹೆಗಡೆ ನೇಮಕ
- Accident News/ಭೀಕರ ರಸ್ತೆ ಅಪಘಾತ, ಸ್ಥಳದಲ್ಲೆ ಓರ್ವ ಸಾವು
ವನಶ್ರೀ ನಗರದ ಶಂಶುನ್ನಿಸಾ ಅಬ್ದುಲ್ ಮುತಲಿಬ್ ಶೇಖ್ ಅವರ ಮನೆಯಲ್ಲಿ ಕಳ್ಳತನವಾಗಿರುವ ಕುರಿತಂತೆ ಮೇ 26ರಂದು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳ ಪತ್ತೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ:ವಿಷ್ಣುವರ್ಧನ್.ಎನ್, ಹೆಚ್ಚುವರಿ ಪೊಲೀಸ್ ಅಧಿಕರಾದ ಸಿ.ಟಿ ಜಯಕುಮಾರ್, ಮತ್ತು ಡಿವೈಎಸ್ಪಿ ಶಿವಾನಂದ ಮದರಖಂಡಿ ಅವರುಗಳ ಮಾರ್ಗದರ್ಶನದಲ್ಲಿ ಸಿಪಿಐ ಭೀಮಣ್ಣ ಎಂಸೂರಿ ಅವರ ನೇತೃತ್ವದಲ್ಲಿ ಪಿಎಸ್ಐ ಗಳಾದ ಐ.ಆರ್.ಗಡ್ಡೆಕರ್ ಮತ್ತು ರವೀಂದ್ರ ಬಿರಾದರ್, ಎಎಸ್ಐಗಳಾದ ಬಸವರಾಜ ಒಕ್ಕುಂದ, ನಾರಾಯಣ ರಾಥೋಡ್ ಮತ್ತು ಪೊಲೀಸ್ ಸಿಬ್ಬಂದಿಗಳು ಹಾಗೂ ಜಿಲ್ಲಾ ಕೇಂದ್ರದ ಸಿಡಿಆರ್ ವಿಭಾಗದ ಸಿಬ್ಬಂದಿಗಳಾದ ಉದಯ ಗುನಗ, ರಮೇಶ್ ನಾಯ್ಕ ಅವರನ್ನು ಒಳಗೊಂಡ ತಂಡವನ್ನು ರಚಿಸಿ ಆರೋಪಿಗಳ ಪತ್ತೆಗಾಗಿ ಬಲೆ ಬೀಸಲಾಗಿತ್ತು.
ಈ ಬಗ್ಗೆ ದಾಂಡೇಲಿ ನಗರ ಠಾಣೆಯು ಮಾಧ್ಯಮಕ್ಕೆ ಅಧಿಕೃತ ಮಾಹಿತಿಯನ್ನು ನೀಡಿದೆ.





