suddibindu.in
ಶಿರಸಿ :
ಚಲಿಸುತ್ತಿದ್ದ ಕಾರೊಂದಕ್ಕೆ ಟ್ರಲ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಿಲ್ಲಿಸಿಟ್ಟ ಬೈಕ್ ‌ ನುಜ್ಜುಗುಜ್ಜಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ನಗರದ ಡಿಡಿಪಿಐ ಕಚೇರಿ ಎದುರು ನಡೆದಿದೆ. ಟಕ್ರನಲ್ಲಿ ಎಸ್ಎಸ್‌ಎಲ್‌ಸಿ ಪ್ರಶ್ನೆ‌ ಪತ್ರಿಕೆ ಸಾಗಾಟ ಮಾಡಲಾಗುತ್ತಿದ್ದ ಎದುರುಗಡೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ರಸ್ತೆ ಬದಿಯಲ್ಲಿ ನಿಲ್ಲಿಸಿಟ್ಟ ಬೈಕ್‌ಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಅಪಘಾತಕ್ಕೆ ಒಳಗಾಗಿರುವ ಕಾರು.ನರೆಂದ್ರ ನೆಜ್ಜೂರ್ ಇವರಿಗೆ ಸೇರಿದ್ದಾಗಿದಗದು ಎಂದು ಗೊತ್ತಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.