suddibindu.in
Dharwad news: ಧಾರವಾಡ: ಈಜಲು ಹೋಗಿದ್ದ ಇಬ್ಬರು ಯುವಕರು ಮುಳುಗಿ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಮನಸೂರು ಗ್ರಾಮದ ಹೊರವಲಯದಲ್ಲಿ ಸಂಭವಿಸಿದೆ.
ಮಾಳಮಡ್ಡಿಯ ಶ್ರೇಯಸ್ ಹಾಗೂ ಇನ್ನೋರ್ವ ಸೇರಿಕೊಂಡು ಮನಸೂರು ಗ್ರಾಮದ ಹೊರವಲಯದಲ್ಲಿರುವ ಕಲ್ಲು ಕ್ವಾರಿಯಲ್ಲಿ ಈಜಲು ಹೋಗಿದ್ದರು. ಆಗ ಈಜು ಬರದೇ ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ
- ಗೋವಾಕ್ಕೆ ತೆರಳುತ್ತಿದ್ದ ಪ್ರವಾಸಿಗರ ವಾಹನ ಪಲ್ಟಿ : ಚಾಲಕ ಗಂಭೀರ
- ಕೆಡಿಸಿಸಿ ಬ್ಯಾಂಕ್ ಚುನಾವಣೆ ಶಿವರಾಮ ಹೆಬ್ಬಾರ್ ಎಚ್ಚರಿಕೆ ಹೆಜ್ಜೆ, ಮಂಕಾಳ ವೈದ್ಯರಿಗೆ ಅಧ್ಯಕ್ಷ ಸ್ಥಾನ ಸಾಧ್ಯತೆ
- ಉತ್ತರಕನ್ನಡದಲ್ಲಿ ಸಹಾಯಕ ಕಮಿಷನರ್ ಅಧಿಕಾರಿಗಳ ಕೊರತೆ: ಸಂಕಷ್ಟದಲ್ಲಿ ಸಿಲುಕಿರುವ ಜನತೆ
ಸ್ಥಳಕ್ಕೆ ಅಗ್ನಿಶಾಮಕ ದಳದವರು ಭೇಟಿ ನೀಡಿ ಶ್ರೇಯಸ್ ಎಂಬಾತನ ಶವವನ್ನು ಹೊರತೆಗೆದಿದ್ದಾರೆ. ಇನ್ನೋರ್ವನ ಮೃತದೇಹಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರು ಹಾಗೂ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.