suddibindu.in
Sirsi: ಶಿರಸಿ: ಉಗ್ರ ಸಂಘಟನೆ ಜತೆ ಸಂಪರ್ಕ ಹೊಂದುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಕೋಮುಗಲಭೆ ಸೃಷ್ಟಿಸುವಂತಹ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದಲ್ಲ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದಾಸನಕೊಪ್ಪ ಗ್ರಾಮದಲ್ಲಿ NIA ತಂಡದಿಂದ ಬಂಧನಕ್ಕೆ‌ ಒಳಗಾಗಿರುವ ಅಬ್ದುಲ್ ಶಕೂರ ರಾಮೇಶ್ವರಂ ಕೆಫೆ ಬ್ಲಾಸ್ಟ್, (Rameswaram Cafe) ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿಗಳಿಗೆ ಪ್ರಚೋದನೆ ನೀಡಿದ್ದ ಎನ್ನಲಾಗಿದೆ
.

ಇದನ್ನೂ ಓದಿ

ದುಬೈನಲ್ಲಿ ಉಳಿದುಕೊಂಡೆ ಸಂಚು.!
ಈತ ಕಳೆದ ಅನೇಕ ವರ್ಷಗಳಿಂದ ದುಬೈನಲ್ಲಿ ಕೆಲಸ ಮಾಡಿಕೊಂಡು ಉಗ್ರ ಸಂಘಟನೆ ಜೊತೆ ಲಿಂಕ್ ಇಟ್ಟುಕೊಂಡಿದ್ದ ಎನ್ನಲಾಗಿದೆ.ಬಕ್ರೀದ್ ಹಬ್ಬಕ್ಕಾಗಿ ಈತ ಕೆಲ ದಿನಗಳ ಹಿಂದಷ್ಟೇ ದಾಸನಕೊಪ್ಪಕ್ಕೆ ಬಂದಿದ್ದ,ಈತ ದುಬೈನಿಂದ ಬಂದಿರುವ ಬಗ್ಗೆ ಸುಳಿವು ಸಿಕ್ಕ ಎನ್ಐಎ ತಂಡ ಶಿರಸಿಗೆ ಆಗಮಿಸಿ ಬನವಾಸಿ ಪೊಲೀಸರ ಸಹಕಾರದಿಂದ ಯುವಕನನ್ನು ಬಂಧಿಸಿದೆ. ಬಂಧಿತ ವ್ಯಕ್ತಿ ನಿಷೇಧಿತ ಪಿಎಫ್‌ಐ ಸಂಘಟನೆಯ ಸದಸ್ಯ ಆಗಿದ್ದ ಎನ್ನಲಾಗಿದೆ.

ಈತ ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಬ್ಲಾಸ್ಟ್, ಮಂಗಳೂರಿನಲ್ಲಿ ನಡೆದ ಕುಕ್ಕರ್​ ಬಾಂಬ್​ ಸ್ಫೋಟ ರಾಮೇಶ್ವರಂ ಕೆಫೆ ಬ್ಲಾಸ್ಟ್, ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿಗಳಿಗೆ ಪ್ರಚೋದನೆ, ಶಿವಮೊಗ್ಗದಲ್ಲಿ ಮಸೀದಿ ಹಾಗೂ ಇತರೆ ಪ್ರದೇಶಗಳಲ್ಲಿ ಬಾಂಬ್ ಬ್ಲಾಸ್ಟ್ ಆರೋಪಿಗಳಿಗೆ ಪ್ರಚೋದನೆ ನೀಡಿರುವ ಆರೋಪ‌ ಕೂಡ ಈತನ ಮೇಲಿದೆ. ಆನ್‌ಲೈನ್ ಮೂಲಕ ಭಯೋತ್ಪಾದಕ ಸಂಘಟನೆ ಜತೆ ಸಂಪರ್ಕ ಹಾಗೂ ಪಾಸ್‌ಪೋರ್ಟ್‌ ನಕಲಿ ದಾಖಲೆ ನೀಡಿದ ಆರೋಪದಡಿ ಆರೋಪಿಯನ್ನು ಬಂಧಿಸಲಾಗಿದೆ. ಬನವಾಸಿಯಲ್ಲಿ ಬಂಧನವಾಗುಲಿರುವ ಆರೋಪಿ ಅಬ್ದುಲ್ ಶಕೂರ್ ಎಂಬಾತನನ್ನ ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ.