suddibindu.in
ಕಾರವಾರ: ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರದ ಬೈತಖೋಲ್ ಮೀನುಗಾರಿಕೆ ಬಂದರಿನ ಬಳಿ ಕುಂದಾಪುರ ಮೂಲದ ವ್ಯಕ್ತಿ ಓರ್ವನ ಶವ ಪತ್ತೆಯಾಗಿದೆ.
ಕುಂದಾಪುರ ಮೂಲದ ಯೋಗೇಶ ಟಿ.ಆರ್ (23) ಮೃತ ವ್ಯಕ್ತಿಯಾಗಿದ್ದಾನೆ. ಇಂದು ಬೆಳಿಗ್ಗೆ ಸಮುದ್ರದಲ್ಲಿ ಮೃತ ದೇಹ ತೆಲುತ್ತಿರುವುದನ್ನ ಕಂಡ ಸ್ಥಳೀಯ ಮೀನುಗಾರರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.ಬಳಿಕ ಸ್ಥಳಕ್ಕೆ ಬಂದ ಕಾರವಾರ ನಗರ ಠಾಣೆಯ ಪೊಲೀಸರು ಮೃತ ದೇಹವನ್ನ ಸಮುದ್ರದಿಂದ ಮೇಲಕ್ಕೆತ್ತಿ ಪರಿಶೀನೆ ನಡೆಸಿದ್ದಾರೆ.
ಇದನ್ನೂ ಓದಿ
- ದಿಕ್ಕು ತಪ್ಪಿದ ರಾಜ್ಯ ಬಿಜೆಪಿಗೆ (BJP) ಸಂಘ ಪರಿವಾರದ ಹೊಸ ಪ್ಲ್ಯಾನ್?
- ಸುಚಿತ್ರ ಸೌಂದರ್ಯಕ್ಕೆ ಸೋತ ಜ್ಯೋತಿಷಿ..? ಮೊದಲ ಭೇಟಿಯಲ್ಲೇ 35 ಸಾವಿರ ಸುರಿದ ಕಮಲಾಕರ ಭಟ್..!
- ಸುಚಿತ್ರಾ ಯಾರು? ಸುರೇಖಾ ಯಾರು? ವಸಂತ್ ನಾಯ್ಕ್ ಕೊಲೆ ಪ್ರಕರಣದಲ್ಲಿ ಸ್ಫೋಟಕ ಸತ್ಯಗಳು ಒಂದೊಂದಾಗಿ ಬಹಿರಂಗ!
ಈತ ಕುಂದಾಪುರದ ವ್ಯಕ್ತಿ ಎನ್ನುವುದು ಪತ್ತೆಯಾಗಿದೆ. ಈತ ನಾಪತ್ತೆ ಆಗಿರುವ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಜೂನ್ 19ರಂದು ಪ್ರಕರಣ ದಾಖಲಾಗಿತ್ತು. ಇದೀಗ ಮೃತ ದೇಹ ಪತ್ತೆಯಾಗಿರುವ ಬಗ್ಗೆ ಕಾರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.







