suddibindu.in
ಕಾರವಾರ: ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರದ ಬೈತಖೋಲ್ ಮೀನುಗಾರಿಕೆ ಬಂದರಿನ ಬಳಿ ಕುಂದಾಪುರ ಮೂಲದ ವ್ಯಕ್ತಿ ಓರ್ವನ ಶವ ಪತ್ತೆಯಾಗಿದೆ.
ಕುಂದಾಪುರ ಮೂಲದ ಯೋಗೇಶ ಟಿ.ಆರ್ (23) ಮೃತ ವ್ಯಕ್ತಿಯಾಗಿದ್ದಾನೆ. ಇಂದು ಬೆಳಿಗ್ಗೆ ಸಮುದ್ರದಲ್ಲಿ ಮೃತ ದೇಹ ತೆಲುತ್ತಿರುವುದನ್ನ ಕಂಡ ಸ್ಥಳೀಯ ಮೀನುಗಾರರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.ಬಳಿಕ ಸ್ಥಳಕ್ಕೆ ಬಂದ ಕಾರವಾರ ನಗರ ಠಾಣೆಯ ಪೊಲೀಸರು ಮೃತ ದೇಹವನ್ನ ಸಮುದ್ರದಿಂದ ಮೇಲಕ್ಕೆತ್ತಿ ಪರಿಶೀನೆ ನಡೆಸಿದ್ದಾರೆ.
ಇದನ್ನೂ ಓದಿ
- ಆರ್ಟಿಐ ಹೆಸರಿನಲ್ಲಿ ಕೋಟಿ ಹಣದ ಬೇಡಿಕೆ: ಮುಂಡಗೋಡ-ಹುಬ್ಬಳ್ಳಿ ಗ್ಯಾಂಗ್ ಪೊಲೀಸ್ ಬಲೆಗೆ..!
- ಐದು ವರ್ಷ ಅಪಘಾತವಿಲ್ಲ.!ಭಟ್ಕಳದ ಚಾಲಕ ರಾಮಚಂದ್ರ ನಾಯ್ಕ ಅವರಿಗೆ ಬೆಳ್ಳಿ ಪದಕದ ಗೌರವ
- ನ್ಯಾಯ ಸಿಗದಿದ್ದರೆ ಬಸ್ಸ್ಟ್ಯಾಂಡ್ನಲ್ಲಿ ಧರಣಿ : ಆಟೋ ಚಾಲಕರಿಂದ ಎಚ್ಚರಿಕೆ
ಈತ ಕುಂದಾಪುರದ ವ್ಯಕ್ತಿ ಎನ್ನುವುದು ಪತ್ತೆಯಾಗಿದೆ. ಈತ ನಾಪತ್ತೆ ಆಗಿರುವ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಜೂನ್ 19ರಂದು ಪ್ರಕರಣ ದಾಖಲಾಗಿತ್ತು. ಇದೀಗ ಮೃತ ದೇಹ ಪತ್ತೆಯಾಗಿರುವ ಬಗ್ಗೆ ಕಾರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.







