suddibindu.in
ಮಂಗಳೂರು : ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಗಾಳಿ ಮಳೆಗೆ ಕೌಂಪೌಂಡ್ ಗೋಡೆ ಕುಸಿದು ಬಿದ್ದು ಮನೆ ನೆಲಸಮವಾಗಿ ಇಬ್ಬರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಉಳ್ಳಾಲದ ಮುನ್ನೂರು ಗ್ರಾಮದಲ್ಲಿ ನಸುಕಿನ ಜಾವ ನಡೆದಿದೆ.
ಯಾಸಿರ್ (45), ಅವರ ಪತ್ನಿ ಮರಿಯಮ್ಮ(40), ಮಕ್ಕಳಾದ ರಿಹಾನ(11), ರಿಫಾನ (17) ಮೃತಪಟ್ಟವರಾಗಿದ್ದಾರೆ.ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಪಕ್ಕದ ಮನೆಯ ಕಂಪೌಂಡ್ ಗೋಡೆ ಕುಸಿದು ಯಾಸಿರ್ ಮನೆಗೆ ಬಿದ್ದಿದೆ. ಇದರಿಂದಾಗಿ ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಮಲಗಿದಲ್ಲೇ ದುರಂತ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ
- ಹೊನ್ನಾವರ ಪ್ರವಾಸೋದ್ಯಮಕ್ಕೆ ಆನಂದ್ ಮಹೀಂದ್ರಾ ಮೆಚ್ಚುಗೆ: ರಾಷ್ಟ್ರದ ಗಮನ ಸೆಳೆದ ಶರಾವತಿ ಹಿನ್ನೀರು
- ವಿದ್ಯಾರ್ಥಿಗಳ ಸುರಕ್ಷತೆಗೆ ಮೊದಲ ಆದ್ಯತೆ: ವಸತಿಶಾಲೆಗಳ ತುರ್ತು ಪರಿಶೀಲನೆಗೆ ಶಾಸಕ ಭೀಮಣ್ಣ ನಾಯ್ಕ ಖಡಕ್ ಸೂಚನೆ
- ಮೃತ ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ ಶಾಸಕ ಭೀಮಣ್ಣ ನಾಯ್ಕ
ಮೂರು ಗಂಟೆಗಳ ಕಾರ್ಯಾಚರಣೆ ಬಳಿಕ ನಾಲ್ಕು ಮೃತದೇಹ ಹೊರಕ್ಕೆ ತೆಗೆಯಲಾಗಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ, ಪರಿಶೀಲನೆ ನಡೆಸಿದ್ದಾರೆ.




